Sunday, June 29, 2025
spot_imgspot_img
spot_imgspot_img

ಮಚ್ಚಿನಿಂದ ಹಲ್ಲೆಗೈದು ಉದ್ಯಮಿಯ ಭೀಕರ ಹತ್ಯೆ; ಪತ್ನಿ ಗಂಭೀರ..!

- Advertisement -
- Advertisement -

ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಮಹಾರಾಷ್ಟ್ರ ಪುಣೆ ಮೂಲದ ಉದ್ಯಮಿ ವಿನಾಯಕ ನಾಯ್ಕ (52) ಎಂದು ಗುರುತಿಸಲಾಗಿದೆ.

ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ನಡೆದ ಘಟನೆ ನಡೆದಿದೆ.

ಬೆಳ್ಳಂಬೆಳಗ್ಗೆ ಅಪರಿಚಿತರು ಏಕಾಏಕಿ ಬಂದು ವಿನಾಯಕ ದಂಪತಿ ಮೇಳೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಾಕೆಯನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉದ್ಯಮಿ ವಿನಾಯಕ ನಾಯ್ಕ ತಮ್ಮ ಪತ್ನಿಯೊಂದಿಗೆ ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಹಣಕೊಣ ಗ್ರಾಮಕ್ಕೆ ಬಂದಿದ್ದರು. ಇಂದು ಬೆಳಗ್ಗೆ ಪುಣೆಗೆ ಹೊಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಅಷ್ಟರಲ್ಲೇ ಕೊಲೆ ನಡೆದಿರುವುದು ಭಾರಿ ಅನುಮಾನ ಹುಟ್ಟಿಸಿದೆ. ಕೊಲೆ ಯಾರೂ ಮಾಡಿದ್ದು ಮತ್ತು ಯಾಕೆ ಮಾಡಿದ್ದು? ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!