Tuesday, April 30, 2024
spot_imgspot_img
spot_imgspot_img

ಪ್ರವಾದಿ ಮಹಮ್ಮದ್ ಮುಸ್ತಫ (ಸ.ಅ) ಜನ್ಮ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಜಂಟಿ ಆಶ್ರಯದಲ್ಲಿ ಯಶಸ್ವಿ ರಕ್ತದಾನ ಶಿಬಿರ.

- Advertisement -G L Acharya panikkar
- Advertisement -

ಮಂಗಳೂರು,ದೇರಳಕಟ್ಟೆ,ನವಂಬರ್ 01 :ಪ್ರವಾದಿ ಮಹಮ್ಮದ್ ಮುಸ್ತಫ (ಸ. ಅ) ಜನ್ಮ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)ಓಲ್ಡ್ ಸ್ಟೊಡೆ೦ಟ್ಸ್ ಅಸೋಸಿಯೇಶನ್ (ರಿ) ಹಯಾತುಲ್ ಇಸ್ಲಾಂ ಮದರಸ ದೇರಳಕಟ್ಟೆ ಹಾಗೂ SKSSFದೇರಳಕಟ್ಟೆ ಶಾಖೆ, ಜಂಟಿ ಆಶ್ರಯದಲ್ಲಿ ,ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 01 ನವೆಂಬರ್ 2020 ನೇ ಆದಿತ್ಯವಾರದಂದು BCC ಹಾಲ್ ದೇರಳಕಟ್ಟೆ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.

ಬದ್ರಿಯಾ ಜುಮಾ ಮಸೀದಿ ದೇರಳಕಟ್ಟೆ ಖತೀಬರಾದ ಬಹು|ಹಾಜಿ ಅಬೂಬಕ್ಕರ್ ರಿಯಾಝ್ ರಹ್ಮಾನಿ ಉಸ್ತಾದರ ದುಃವಾಶೀರ್ವಚನದ ಮೂಲಕ ಚಾಲನೆಗೊಂಡ ಕಾರ್ಯಕ್ರಮವನ್ನು, ಬದ್ರಿಯಾ ಜುಮಾ ಮಸೀದಿ, ಅಧ್ಯಕ್ಷರಾದ ಹಾಜಿ ಅಬೂಬಕ್ಕರ್ ನಾಟೆಕಲ್ ಅಧ್ಯಕ್ಷತೆ ವಹಿಸಿದ್ದರು.

ಕೊರೋನಾ ಭೀತಿಯ ನಡುವೆಯೂ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರದಲ್ಲಿ ಎಲ್ಲಾ ಸುರಕ್ಷಿತಾ ಮುನ್ನೆಚ್ಚರಿಕೆಯನ್ನು ಪಾಲಿಸಿ ಕೊಂಡು ಒಟ್ಟು 106 ಮಂದಿ ರಕ್ತದಾನ ಮಾಡಿ ಜೀವದಾನಿಯಾದರು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.


ಮುಖ್ಯ ಅತಿಥಿಗಳಾಗಿ ಹಾಜಿ ಮಹಮ್ಮದ್ ಡಿ ಎಚ್,ಇಸ್ಮಾಯಿಲ್ ಡಿ ,ಹಾಜಿ ಅಬ್ಬಾಸ್ ಡಿ,ಅಬ್ದುಲ್ ರಹಿಮಾನ್ ದಾರಿಮಿ ತಬೂಕ್,ಅಬ್ದುಲ್ ರಹಿಮಾನ್, ಇಲ್ಯಾಸ್ ಹಾಜಿ,ಅಬ್ದುಲ್ ರಹಿಮಾನ್ ಸೇಠ್,ನಿಝಾಮ್ ಡಿ ಯಮ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಕಾರ್ಯ ನಿರ್ವಾಹಕರು ಹಾಗೂ ದೇರಳಕಟ್ಟೆ ಪರಿಸರದ ಸಾರ್ವಜನಿಕರು ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಯಮ್ ಯಚ್ ಮಲಾರ್ ಇವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ನಿರ್ವಾಹಕ ಅಶ್ರಪ್ ಅರಬಿ ಕಲ್ಲಡ್ಕ ಮಾತನಾಡಿ ರಕ್ತ ದಾನ ದ ಬಗ್ಗೆ ಮಾಹಿತಿ ನೀಡಿದರು.

ಓಲ್ಡ್ ಸ್ಟೂಡೆ೦ಟ್ಸ್ ಅಸೋಸಿಯೇಶನ್ ದೇರಳಕಟ್ಟೆ ಅಧ್ಯಕ್ಷರಾದ ಅಶ್ರಪ್ ದೇರಳಕಟ್ಟೆ ಸ್ವಾಗತಿಸಿ ನೌಶಾದ್ ಬದಿಯಾರ್ ಕಾರ್ಯಕ್ರಮ ನಿರೂಪಿಸಿದರು.

ರಕ್ತದಾನ ಮಾಡಿದ ಸರ್ವ ಸಹೃದಯೀ ದಾನಿಗಳಿಗೂ,ಆಸ್ಪತ್ರೆ ಸಿಬ್ಬಂದಿ ವರ್ಗಕ್ಕೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ದೇರಳಕಟ್ಟೆ ಜನಸ್ನೇಹಿ ನಾಗರಿಕರಿಗೂ ಹಾಗೂ ಕಾರ್ಯಕ್ರಮದ ಯಶಸ್ವಿಗಾಗಿ ಹಗಳಿರುಲು ದುಡಿದ ಎಲ್ಲಾ ಕಾರ್ಯಕರ್ತರಿಗೂ,ಮಸೀದಿಯ ಆಡಳಿತ ಮಂಡಳಿಗೂ,ಮಾಧ್ಯಮ ಪ್ರತಿನಿಧಿಗಳಿಗೂ ಸಂಘಟಕರು ಕೃತಜ್ಞತೆಯನ್ನು ತಿಳಿಸಿದ್ದಾರೆ.

ಪ್ರಕಟಣೆ:
ಮಾಧ್ಯಮ ವಿಭಾಗ:
ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)

- Advertisement -

Related news

error: Content is protected !!