Friday, June 27, 2025
spot_imgspot_img
spot_imgspot_img

(ಸೆ.29 ) ಕಿನ್ನಿಗೋಳಿ – ಪದ್ಮನ್ನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿಯವರಿಗೆ ಐಕ್ಯ ವೇದಿಕೆ ಕೊಡಾಜೆ ವತಿಯಿಂದ ಅಭಿನಂದನೆ

- Advertisement -
- Advertisement -

ಕಿನ್ನಿಗೋಳಿ : ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕೊಡಾಜೆಯ ಐಕ್ಯ ವೇದಿಕೆ ಕೊಡಾಜೆ ಇದರ ವತಿಯಿಂದ ಐಕ್ಯ-ಭಾವೈಕ್ಯತೆಯನ್ನು ಮೈಗೂಡಿಸಿಕೊಂಡು ಸರ್ವ ಧರ್ಮೀಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾನವೀಯ ಮೌಲ್ಯಗಳಿಗೆ ಒತ್ತು ನೀಡುತ್ತಿರುವ ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿ, ಪದ್ಮನ್ನೂರು – ಕಿನ್ನಿಗೋಳಿ ಇದರ ಅದ್ಯಕ್ಷರು ಹಾಗೂ ಸರ್ವ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವು ಭಾನುವಾರ (ಸೆ.29) ಸಂಜೆ ಸಂಜೆ 5.30 ಕ್ಕೆ ಪದ್ಮನ್ನೂರಿನ ಸಾರ್ವಜನಿಕ ಯಕ್ಷಗಾನ ಬಯಲಾಟ ಸುವರ್ಣ ಮಹೋತ್ಸವ ಸಭಾ ಭವನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ದೇವಸ್ಥಾನದ ಅರ್ಚಕರು, ಮಸೀದಿ ಖತೀಬರು ಹಾಗೂ ಚರ್ಚ್ ನ ಧರ್ಮಗುರುಗಳಿಗೆ ಗೌರವಾರ್ಪಣೆ, ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿಯ ಅಧ್ಯಕ್ಷರಿಗೆ ಸನ್ಮಾನ, ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ನೆರವೇರಲಿದೆ ಎಂದು ಐಕ್ಯ ವೇದಿಕೆ ಕೊಡಾಜೆಯ ಪ್ರಕಟಣೆ ತಿಳಿಸಿದೆ .

- Advertisement -

Related news

error: Content is protected !!