Sunday, June 29, 2025
spot_imgspot_img
spot_imgspot_img

ಮಂಗಳೂರು: ಈಜಲು ತೆರಳಿದ್ದ ಸ್ನೇಹಿತರಿಬ್ಬರು ನೀರಿನ ಸುಳಿಗೆ ಸಿಲುಕಿ ಮೃತ್ಯು..!

- Advertisement -
- Advertisement -

ಮಂಗಳೂರು:ಈಜಲು ತೆರಳಿದ್ದ ನಾಲ್ಕು ಮಂದಿಯಲ್ಲಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆ ಮಳವೂರು ರೈಲ್ವೇ ಸೇತುವೆ ಬಳಿ ಫಲ್ಗುಣಿ ನದಿಯಲ್ಲಿ ನಡೆದಿದೆ.

ಮಳವೂರು ರೈಲ್ವೇ ಸೇತುವೆ ಬಳಿ ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ್ದವರನ್ನು ಮಂಗಳೂರು ನಗರದ ಕೋಟಿಕಲ್‌ ಅರುಣ್ (19), ದೀಕ್ಷಿತ್ (20), ಕೊಟ್ಟರ ಚೌಕಿಯ ಸುಮಿತ್ (20) ಹಾಗೂ ಉರ್ವಸ್ಟೋರಿನ ಅನೀಶ್ (19) ಎಂದು ಗುರುತಿಸಲಾಗಿದೆ.

ಮಳವೂರು ರೈಲ್ವೇ ಸೇತುವೆ ಬಳಿ ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರ ಪೈಕಿ ಸುಮಿತ್ ಮತ್ತು ಅನೀಶ್ ನೀರಿನ ಸುಳಿಗೆ ಸಿಕ್ಕಿಕೊಂಡು ನೀರುಪಾಲಾಗಿದ್ದಾರೆ. ಘಟನೆಯ ಮಾಹಿತಿ ತಿಳಿದ ಬಜಪೆ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಆರಂಭಿಸಿದ್ದರು. ಅಗ್ನಿಶಾಮಕ ದಳದವರು ಬೆಳಕಿನ ವ್ಯವಸ್ಥೆಯೊಂದಿಗೆ ತಡರಾತ್ರಿಯವರೆಗೂ ಶೋಧ ಕಾರ್ಯ ನಡೆಸಿದ್ದು, ಘಟನಾ ಸ್ಥಳಕ್ಕೆ ಮುಳುಗು ತಜ್ಞರು ಕೂಡ ಆಗಮಿಸಿದ್ದರು. ಜೊತೆಗೆ ಬಜಪೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೀಪ್ ಜಿ.ಎಸ್. ಮತ್ತು ಸಿಬ್ಬಂದಿ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದರು.

ಮೃತ ಸುಮಿತ್ ಕೊಟ್ಟಾರ ಚೌಕಿಯಲ್ಲಿನ ಗ್ಯಾರೇಜ್ ವೊಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಇನ್ನು ಅನಿಶ್ ಸೋಡಾ ಫಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!