Saturday, June 28, 2025
spot_imgspot_img
spot_imgspot_img

ಕಾರ್ಕಳ: ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ತಂದೆ – ಮೂರು ಮಕ್ಕಳು ಮೃತ್ಯು

- Advertisement -
- Advertisement -

ಕಾರ್ಕಳ: ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ತಂದೆ – ಮೂರು ಮಕ್ಕಳು ಮೃತಪಟ್ಟ ಘಟನೆ ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಇಂದು ನಡೆದಿದೆ.

ಮೃತರನ್ನು ಸುರೇಶ್ ಆಚಾರ್ಯ (36 ವ), ಮಕ್ಕಳಾದ ಸುಮೀಕ್ಷಾ (7 ವ) ಸುಶ್ಮಿತಾ (5 ವ), ಸುಶಾಂತ್ (2 ವ) ಎಂದುಗುರುತಿಸಲಾಗಿದೆ.

ಸುರೇಶ್ ಆಚಾರ್ಯ ಅವರ ಪತ್ನಿ ಮೀನಾಕ್ಷಿ (32 ವ) ಗಂಭೀರ ಗಾಯಗೊಂಡಿದ್ದು, ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ನಲ್ಲೂರು ಗ್ರಾಮದ ಕೊಡಪಟ್ಯಾ ಮನೆಯವರು. ಇವರು ವೇಣೂರಿನಿಂದ ನಲ್ಲೂರಿಗೆ ಬರುತ್ತಿದ್ದರು. ಈ ವೇಳೆ ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

- Advertisement -

Related news

error: Content is protected !!