Saturday, June 28, 2025
spot_imgspot_img
spot_imgspot_img

ಕಿನ್ನಿಗೋಳಿ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ..!

- Advertisement -
- Advertisement -

ಕಿನ್ನಿಗೋಳಿ: ಬಾವಿಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಗೋಳಿ ಸಮೀಪದ ಐಕಳ ನೆಲ್ಲಿಗುಡ್ಡೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬಾದಾಮಿ ಮೂಲದ ಸುನೀತ (31) ಎಂದು ಗುರುತಿಸಲಾಗಿದೆ.

ಕರ್ನಾಟಕ ಬಾದಾಮಿ ಕೆರೂರು ಗುಬ್ಬೇರಕೊಪ್ಪ ಮೂಲದ ಸುನೀತ ಕಿನ್ನಿಗೋಳಿ ಐಕಳ ಪಾದೆ ಕೋರೆ ಬಳಿಯ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದು, ಭಾನುವಾರ ಮಧ್ಯಾಹ್ನದವರೆಗೆ ಮನೆಯಲ್ಲಿ ಇದ್ದು ಬಳಿಕ ಏಕಾಏಕಿ ನಾಪತ್ತೆಯಾಗಿದ್ದರು. ಈ ವೇಳೆ ಸ್ಥಳೀಯರು ಪರಿಸರದಲ್ಲಿ ಹುಡುಕಾಡಿದ್ದು ಬಳಿಕ ಬಾಡಿಗೆ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಮೃತದೇಹವನ್ನು ಮೇಲಕ್ಕೆ ಎತ್ತಲಾಗಿದೆ.

ಮೂಲ್ಕಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿದ್ದಾರೆ. ಮೃತ ಸುನೀತ ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

- Advertisement -

Related news

error: Content is protected !!