Sunday, June 29, 2025
spot_imgspot_img
spot_imgspot_img

ಉದ್ಯಮಿ ಧಾರ್ಮಿಕ ಮುಂದಾಳು ಮುಮ್ತಾಝ್ ಅಲಿ ಸಾವಿನ ಪ್ರಕರಣಕ್ಕೆ ಹೊಸ ತಿರುವು : ಸೆಕ್ಸ್‌ ವಿಡಿಯೋ ಬಹಿರಂಗ ಪಡಿಸುವುದಾಗಿ ಬೆದರಿಸಿ ಹಣಕ್ಕೆ ಬ್ಲ್ಯಾಕ್ ಮೇಲ್

- Advertisement -
- Advertisement -

ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೋದರ ಉದ್ಯಮಿ ಮುಲ್ತಾಜ್ ಅಲಿ ಅವರ ಶವ ಸೋಮವಾರ ಬೆಳಿಗ್ಗೆ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಅವರ ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಸಾಮಾಜಿಕ-ಧಾರ್ಮಿಕ ಮುಂದಾಳು ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೆದರಿಕೆಯಿಟ್ಟ ಆರೋಪಿದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಆಲಿ ಸಹೋದರ ಹೈದ‌ರ್ ಆಲಿ ಕಾವೂರು ಠಾಣೆಗೆ ದೂರು ನೀಡಿದ್ದು. 6 ಜನರ ವಿರುದ್ಧ ಕೇಸ್ ದಾಖಲಾಗಿದೆ. ಕಾಟಿಪಳ್ಳ ನಿವಾಸಿ ರೆಹಮತ್, ಸುರತ್ಕಲ್ ಆಸುಪಾಸಿನ ನಿವಾಸಿಗಳಾದ ಅಬ್ದುಲ್ ಸತ್ತಾರ್. ಶಾಫಿ. ಮುಸ್ತಫಾ, ಶೋಯಿಬ್. ಸತ್ತಾರ್ ಮತ್ತು ಮುಮ್ರಾಜ್ ಆಲಿಯವರ ಕಾರು ಚಾಲಕ ಸಿರಾಜ್ ಪ್ರಕರಣದ ಆರೋಪಿಗಳು.
ಕಾವೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) 173ರ ಅಡಿ ಎಫ್‌ ಐ ಆರ್‌ ದಾಖಲಾಗಿದೆ.

ಮುಮ್ತಾಝ್ ಅಲಿ ಅವರ ಕಛೇರಿಯಲ್ಲಿ ಈ ಹಿಂದೆ ಉದ್ಯೋಗಿಯಾಗಿದ್ದ ಸುರತ್ಕಲ್ ಕೃಷ್ಣಾಪುರದ 7ನೇ ಬ್ಲಾಕ್ ನಿವಾಸಿ ಆಯಿಷಾ ರೆಹಮತ್ ಎಂಬಾಕೆಯೇ ಪ್ರಕರಣದ ಕಿಂಗ್ ಪಿನ್ ಆಗಿದ್ದು, ಮುಮ್ತಾಜ್ ಅಲಿಗೆ ನಿರಂತರವಾಗಿ ಆಲಿಯವರನ್ನು ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕಾಗಿ ಪೀಡಿಸುತ್ತಿದ್ದಳು. ಸೆಕ್ಸ್ ವಿಡಿಯೋ ಬಹಿರಂಗ ಪಡಿಸುವುದಾಗಿ ಬೆದರಿಸುತ್ತಿದ್ದಳು. ಇದರಿಂದಾಗಿ ಸಾಮಾಜಿಕವಾಗಿ ಮಾನ ಹೋಗುವ ಅಂಜಿಕೆಯಿಂದ ಮುತ್ತಾಝ್ ಆಲಿ ಅವರು ನದಿಗೆ ಹಾರಿ ಪ್ರಾಣ ಕಳೆದುಕೊಂಡಿರಬಹುದು ಎಂದು ಶಂಕಿಸಲಾಗುತ್ತಿದೆ.

ಈಕೆಯ ಪತಿ ಶೋಯೆಬ್ ಕೂಡ ಸಾಥ್ ನೀಡಿದ್ದ. ಹಣಕ್ಕಾಗಿ ಪದೇ ಪದೆ ಸತಾಯಿಸುತ್ತಿದ್ದ ರೆಹಮತ್‌ಗೆ 50 ಲಕ್ಷ ಹಣವನ್ನು ಮುಮ್ತಾಜ್ ನೀಡಿದ್ದಾರೆ. ಅದರಲ್ಲಿ 25 ಲಕ್ಷ ವನ್ನು ಚೆಕ್ ಮೂಲಕ ಪಾವತಿಸಿದ್ದಾರೆ. ನಂತರವೂ ಹೆಚ್ಚಿನ ಹಣಕ್ಕೆ ರೆಹಮತ್ ಬೇಡಿಕೆ ಇಟ್ಟಾಗ ಮುಮ್ತಾಜ್ ನಿರಾಕರಿಸಿದ್ದಾರೆ. ಈ ವೇಳೆ ಮುಮ್ತಾಜ್ ಅವರ ರಾಜಕೀಯ ವಿರೋಧಿ ಅಬ್ದುಲ್ ಸತ್ತಾರ್‌ನ್ನು ಸಂಪರ್ಕಿಸಿ ಎಲ್ಲ ವಿಚಾರ ತಿಳಿಸಿದ್ದಾಳೆ. ಈ ಕಾಲ್ ರೆಕಾರ್ಡ್‌ನ ಆಡಿಯೊ ಇಟ್ಟುಕೊಂಡು ಸತ್ತಾರ್ ಮತ್ತು ಉಳಿದ ಮೂವರು ಮುಮ್ತಾಜ್ ಅಲಿಗೆ 2 ಕೋಟಿ ರೂ. ಕೊಡುವಂತೆ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ. ಈ ನಡುವೆ ಆಯಿಷಾ ರೆಹಮತ್, ಮುಮ್ತಾಜ್ ಅವರ ಪತ್ನಿಯನ್ನು ಭೇಟಿಯಾಗಿದ್ದು, ಇದರ ಬಳಿಕ ಮುಮ್ತಾಜ್ ಕುಟುಂಬದಲ್ಲಿ ತೀವ್ರ ಗೊಂದಲ ಸೃಷ್ಟಿಯಾಗಿತ್ತು ಎಂದು ತಿಳಿದುಬಂದಿದೆ.

ಆರೋಪಿಗಳ ಪತ್ತೆಗೆ ಪೊಲೀಸ್ ತಂಡಗಳು ಕಾರ್ಯಾಚರಣೆ ಆರಂಭಿಸಿವೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಭಾನುವಾರ ಬೆಳಗ್ಗೆ ಸುಮಾರು 3 ಗಂಟೆ ವೇಳೆಗೆ ಮುಮ್ತಾಜ್ ಅವರು ಕೃತ್ಯಕ್ಕೆ ಕಾರಣರಾದ ವ್ಯಕ್ತಿಗಳನ್ನು ಹೆಸರಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕುಟುಂಬ ಸದಸ್ಯರು ಮತ್ತು ಸ್ನೇಹಿತರಿಗೆ ಆಡಿಯೊ ಸಂದೇಶ ಕಳುಹಿಸಿದ್ದರು. ಈ ಕುರಿತಾಗಿಯೂ ತನಿಖೆ ಮುಂದುವರಿದಿದೆ. ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

- Advertisement -

Related news

error: Content is protected !!