- Advertisement -
- Advertisement -





ಕಾಸರಗೋಡು: ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮೈಲಾಟಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕ ಸ್ಕೂಟರ್ ಸವಾರ ಪೊಯಿನಾಚಿಯ ಮಣಿಕಂಠ (24) ಹಾಗೂ ಗಾಯಗಗೊಂಡ ಬೈಕ್ ಸವಾರ ಮೈಲಾಟಿಯ ಪ್ರಜ್ವಲ್ (23) ಎಂದು ಗುರುತಿಸಲಾಗಿದೆ.
ಬೇಕಲದ ಜ್ಯೂಸ್ ಅಂಗಡಿಯಲ್ಲಿ ಕೆಲಸ ಮುಗಿಸಿ ಮಣಿಕಂಠ ತೆರಳುತ್ತಿದ್ದ ಸ್ಕೂಟರ್ ಮತ್ತು ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ನಡೆದಿದೆ. ರಸ್ತೆಗೆಸೆಯಲ್ಪಟ್ಟ ಮಣಿಕಂಠನನ್ನು ಕಾಸರಗೋಡಿನ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲ್ಲಿಲ್ಲ. ಬೈಕ್ ಸವಾರ ಮೈಲಾಟಿಯ ಪ್ರಜ್ವಲ್ ಗಾಯಗೊಂಡಿದ್ದು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಕಲ ಠಾಣಾ ಪೊಲೀಸರು ಮಹಜರು ನಡೆಸಿದರು.
- Advertisement -