Friday, June 27, 2025
spot_imgspot_img
spot_imgspot_img

ಬೆಂಗಳೂರು: ತೀರ್ಥಹಳ್ಳಿಯ ತಹಶೀಲ್ದಾರ್ ಜಿ. ಬಿ. ಚಿಕ್ಕನಗೌಡರ್ ಬೆಂಗಳೂರಿನ ಲಾಡ್ಜ್‌ನಲ್ಲಿ ಶವವಾಗಿ ಪತ್ತೆ..!

- Advertisement -
- Advertisement -

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಹಶೀಲ್ದಾರ್ ಜಿ. ಬಿ. ಚಿಕ್ಕನಗೌಡರ್ ನಿಗೂಢವಾಗಿ ಸಾವನ್ನಪ್ಪಿರುವ ಬಗ್ಗೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಬೆಂಗಳೂರಿನ ವೈಭವ್ ಲಾಡ್ಜ್‌ನ ಕೊಠಡಿಯಲ್ಲಿ ಬುಧವಾರ(ಅ.16) ರಾತ್ರಿ ‌ತಹಶೀಲ್ದಾರ್ ಜಿ. ಬಿ. ಚಿಕ್ಕನಗೌಡರ್‌ರವರ ಮೃತದೇಹ ಪತ್ತೆಯಾಗಿದೆ. ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿದೆ. ನ್ಯಾಯಾಲಯದ ಕೆಲಸ ನಿಮಿತ್ತ ಬೆಂಗಳೂರಿಗೆ ಬಂದಿದ್ದ ಅವರು ವೈಭವ್ ಲಾಡ್ಜ್‌ನಲ್ಲಿ ಉಳಿದಿದ್ದರು. ಮಂಗಳವಾರ ಸಂಜೆಯಿಂದ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಬಳಿಕ ಅವರ ಮೊಬೈಲ್ ಲೊಕೇಶನ್ ಪರಿಶೀಲಿಸಿದಾಗ ಮೆಜೆಸ್ಟಿಕ್ ಸಮೀಪ ತೋರಿಸಿದೆ.‌ ಅದನ್ನು ಆಧರಿಸಿ ವಿಚಾರಿಸಿದಾಗ, ವೈಭವ್ ಲಾಡ್ಜ್ ಕೊಠಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕೊಠಡಿ ಬಾಗಿಲು ಹಾಕಿತ್ತು. ಪೊಲೀಸರು ಬಾಗಿಲು ತೆರೆದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ಸ್ಪಷ್ಟತೆಯ ಬಗ್ಗೆ ತಿಳಿಯಬೇಕಿದೆ.

ಜಿ. ಬಿ. ಚಿಕ್ಕನಗೌಡರ್ ಮೂಲತಃ ಗದಗದವರು. ತೀರ್ಥಹಳ್ಳಿಯಲ್ಲಿ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಸರ್ಕಾರಿ ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಾಗ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದು, ಅಲ್ಲೇ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!