Saturday, June 28, 2025
spot_imgspot_img
spot_imgspot_img

ಪುತ್ತೂರು: ಬಿಲ್ಲವ ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಅರಣ್ಯಾಧಿಕಾರಿ ವಿರುದ್ಧ ಹಿಂ.ಜಾ.ವೇದಿಕೆಯಿಂದ ಪ್ರತಿಭಟನೆ

- Advertisement -
- Advertisement -

ಪುತ್ತೂರು: ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಮತ್ತು ಭಜನೆ ಮಾಡುವ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದು ಸಂಘಟನೆಯ ಕಾರ್ಯಕರ್ತರ ಬಗ್ಗೆ ಕೀಳುಮಟ್ಟದ ಪದ ಬಳಸಿ ಅವಮಾನ ಮಾಡಿರುವುದಾಗಿ ಆರೋಪಿಸಿ ಅರಣ್ಯ ಸಂರಕ್ಷಣಾ ಅಧಿಕಾರಿ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಭಜನೆ ಮಾಡುವ ಮೂಲಕ ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

This image has an empty alt attribute; its file name is puttur-18-1.jpg

ಸಂಜೀವ ಪೂಜಾರಿಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದಾರೆ. ಬಂಧಿಸುವವರೆಗೂ ಡಿವೈಎಸ್ಪಿ ಕಛೇರಿ ಮುಂದೆಯೇ ಪ್ರತಿಭಟನೆ ನಡೆಸುವುದಾಗಿ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದ್ದಾರೆ.

ಸಂಜೀವ ಪೂಜಾರಿ ವಿರುದ್ಧ ಈಗಾಗಲೇ ಬೆಳ್ಳಾರೆ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ಎಫ್‌ಐಆರ್ ನಲ್ಲಿ ಕ್ಷುಲ್ಲಕ ಸೆಕ್ಷನ್ ಹಾಕಿದ್ದಾರೆಂದು ಹಿಂದೂ ಸಂಘಟನೆಗಳ ಆರೋಪ ಮಾಡಿದ್ದಾರೆ.

- Advertisement -

Related news

error: Content is protected !!