- Advertisement -
- Advertisement -




ಕಾಸರಗೋಡು : ಕಾಸರಗೋಡಿನ ಅರಬ್ಬಿ ಸಮುದ್ರದಲ್ಲಿ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರ ನಜೀಬ್ ಶವ ಪೂಂಜಾವಿ ತೀರದಲ್ಲಿ ಗುರುವಾರ ಪತ್ತೆಯಾಗಿದೆ. ಈ ಮೂಲಕ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ.
ದುರಂತದಲ್ಲಿ ಮೃತರಾದವರನ್ನು ಅಬೂಬಕ್ಕರ್ ಮತ್ತು ನಜೀಬ್ ಎಂದು ಗುರುತಿಸಲಾಗಿದೆ.
ದುರಂತ ಕ್ಕೀಡಾ ಫೈಬರ್ ಬೋಟ್ ನ ಅರ್ಧ ಭಾಗ ಆಯಿತ್ತಲ ಸಮೀಪದ ಕಡಲ ಕಿನಾರೆ ಯಲ್ಲಿ ಗುರುವಾರ ಪತ್ತೆಯಾಗಿದೆ. ಬುಧವಾರ ಮಧ್ಯಾಹ್ನ ಆಯಿತ್ತಲ ಸಮುದ್ರದಲ್ಲಿ ಫೈಬರ್ ಬೋಟ್ ದುರಂತ ಕ್ಕೀಡಾಗಿ ದೋಣಿಯಲ್ಲಿದ್ದ 37 ಮಂದಿ ಸಮುದ್ರಪಾಲಾಗಿದ್ದರು. ಇದರಲ್ಲಿ 35 ಮಂದಿಯನ್ನು ರಕ್ಷಿಸಲಾಗಿತ್ತು. ಕರಾವಳಿ ಪೊಲೀಸರು, ಮೀನುಗಾರರು ಕಾರ್ಯಾಚರಣೆ ನಡೆಸಿ ಸಮುದ್ರಪಾಲಾದವರನ್ನು ಮೇಲಕ್ಕೆತ್ತಿ ರಕ್ಷಿಸಿದರು. ಓರ್ವ ಮೃತಪಟ್ಟು, ಓರ್ವ ನಾಪತ್ತೆ ಯಾಗಿದ್ದರು.
- Advertisement -