Saturday, June 28, 2025
spot_imgspot_img
spot_imgspot_img

ಭಟ್ಕಳ : ಬಸ್ ತಪ್ಪಿಸಲು ಹೋಗಿ ಟ್ಯಾಂಕರ್ ಪಲ್ಟಿ…!!

- Advertisement -
- Advertisement -

ಭಟ್ಕಳ: ಬಸ್‌ನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾದ ಘಟನೆ ಉತ್ತರ ಕನ್ನಡ ಭಟ್ಕಳದಲ್ಲಿ ನಡೆದಿದೆ.

ಮಂಗಳೂರಿನಿಂದ ಹರ್ಯಾಣ ರಾಜ್ಯಕ್ಕೆ ಗೇರು ಎಣ್ಣೆ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಾ.ಹೆ.66 ಭಟ್ಕಳ ಬೈಪಾಸ್ ಬಳಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಟ್ಯಾಂಕರ್ ಚಾಲಕ ರಾಜಸ್ಥಾನ ಮೂಲದ ಮದನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಪುರವರ್ಗದಿಂದ ಬೈಪಾಸ್ ಹೋಗುವ ರಸ್ತೆ ಮದ್ಯೆ ಹಂಪ್ಸ್ (ರಸ್ತೆ ತಡೆ) ಹಾಕಲಾಗಿದ್ದು ಟ್ಯಾಂಕರ್ ಮುಂದೆ ಸಾಗುತ್ತಿದ್ದ ಬಸ್ ಚಾಲಕ ಅಕಸ್ಮಿಕವಾಗಿ ಬ್ರೇಕ್ ಹಾಕಿದ್ದು ಗಲಿಬಿಲಿಗೊಂಡ ಟ್ಯಾಂಕರ್ ಚಾಲಕ ಬಸ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲಿರುವ ಸಣ್ಣ ಪ್ರಪಾತಕ್ಕೆ ಬಿದ್ದಿದೆ ಎನ್ನಲಾಗಿದೆ.

- Advertisement -

Related news

error: Content is protected !!