- Advertisement -
- Advertisement -




ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಆದ ಬೆನ್ನಲ್ಲೇ, ರಾಜಕೀಯ ರಂಗೇರಿದೆ. ಅದರಲ್ಲೂ ನಿನ್ನೆ ಶಿಗ್ಗಾಂವಿ ಮತ್ತು ಸಂಡೂರಿಗೆ ಅಭ್ಯರ್ಥಿಗಳನ್ನು ಬಿಜೆಪಿ ಹೈಕಮಾಂಡ್ ಪ್ರಕಟಿಸಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಶಿಗ್ಗಾಂವಿ ಮತ್ತು ಸಂಡೂರು ಬಂಗಾರು ಹನುಮಂತು ಅವರನ್ನು ಆಯ್ಕೆ ಮಾಡಲಾಗಿದೆ.
ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿದ್ದ ಶಿಗ್ಗಾಂವಿ ಕ್ಷೇತ್ರಕ್ಕೆ ಅವರ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಲಾಗಿದ್ದು, ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಸ್ಪರ್ಧಿಸುತ್ತಿದ್ದಾರೆ.
ಸಂಡೂರು ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಬಂಗಾರು ಹನುಮಂತು, ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.
- Advertisement -