Sunday, June 29, 2025
spot_imgspot_img
spot_imgspot_img

ಮಂಗಳೂರು: ಅಲೆಗಳ ಹೊಡೆತಕ್ಕೆ ಸಿಲುಕಿ ವಿದ್ಯಾರ್ಥಿ ನೀರುಪಾಲು..!

- Advertisement -
- Advertisement -

ಮಂಗಳೂರು : ಅಲೆಗಳ ಹೊಡೆತಕ್ಕೆ ಸಿಲುಕಿ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಶಿವಮೊಗ್ಗ ಮೂಲದ ತಿಲಕ್(21) ಎಂದು ಗುರುತಿಸಲಾಗಿದೆ.

ತಿಲಕ್ ಮುಕ್ಕದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ಇಡ್ಯಾದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇತರ ವಿದ್ಯಾರ್ಥಿಗಳ ಜೊತೆ ಸಮುದ್ರದಲ್ಲಿ ಈಜುತ್ತಿದ್ದಾಗ ಈ ದುರಂತ ಸಂಭವಿಸಿದೆ. ತಿಲಕ್ ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದು, ಸ್ಥಳೀಯರ ನೆರವಿನಿಂದ ಮೃತದೇಹ ಮೇಲಕ್ಕೆತ್ತಲಾಯಿತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!