Sunday, June 29, 2025
spot_imgspot_img
spot_imgspot_img

ವಿಟ್ಲ: ಕಲ್ಲಡ್ಕ ವಲಯ ಮಟ್ಟದ ಪ್ರಾಥಮಿಕ-ಪ್ರೌಢ ಶಾಲೆಗಳ ಕ್ರೀಡಾಕೂಟದಲ್ಲಿ ಮಾಣಿ ಬಾಲವಿಕಾಸ ಶಾಲೆಗೆ ಅವಳಿ ಸಮಗ್ರ ಪ್ರಶಸ್ತಿ

- Advertisement -
- Advertisement -

ವಿಟ್ಲ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬಂಟ್ವಾಳ ಮತ್ತು ಶ್ರೀ ರಾಮಚಂದ್ರ ವಿದ್ಯಾಲಯ, ಅಯೋಧ್ಯಾನಗರ – ಪೆರ್ನೆ ಇವರ ಸಂಯುಕ್ತ ಆಶ್ರಯದಲ್ಲಿ 14 ಮತ್ತು17 ವರ್ಷದ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಕಲ್ಲಡ್ಕ ವಲಯ ಮಟ್ಟದ ಕ್ರೀಡಾಕೂಟವು ಶ್ರೀ ರಾಮಚಂದ್ರ ವಿದ್ಯಾಲಯ, ಅಯೋಧ್ಯಾನಗರ, ಪೆರ್ನೆಯಲ್ಲಿ ಅಕ್ಟೋಬರ್ 23 ಮತ್ತು 24 ರಂದು ನಡೆಯಿತು.

ಸ್ಪರ್ಧೆಯಲ್ಲಿ ವಿದ್ಯಾನಗರ ಪೆರಾಜೆ, ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಒಟ್ಟು 55 ಬಹುಮಾನಗಳನ್ನು ಪಡೆದುಕೊಂಡಿದ್ದು,ಇವುಗಳಲ್ಲಿ 22 ಪ್ರಥಮ, 22 ದ್ವಿತೀಯ, 11 ತೃತೀಯ ಸ್ಥಾನಗಳನ್ನು ಪಡೆದುಕೊಂಡಿರುತ್ತಾರೆ .17ರ ವಯೋಮಾನದ ಪ್ರೌಢಶಾಲಾ ವಿಭಾಗದ ಬಾಲಕಿಯರ ಹಾಗೂ 14ರ ವಯೋಮಾನದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತಂಡಗಳು ಸಮಗ್ರ ಚಾಂಪಿಯನ್ ಶಿಪ್‌ನ್ನು ಪಡೆದುಕೊಂಡಿರುತ್ತವೆ. 17ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದು ಎಲ್ಲಾ ತಂಡಗಳು ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಕ್ರೀಡಾಂಗಣದಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತವೆ.

ಪ್ರಾಥಮಿಕ ವಿಭಾಗದಲ್ಲಿ 7ನೇ ತರಗತಿಯ ಮೊಹಮ್ಮದ್ ಫೌಝನ್, 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 8 ನೇ ತರಗತಿಯ ಕೃತಿ ಎನ್. ಪಿ ಹಾಗೂ 17ರ ವಯೋಮಾನದ ಬಾಲಕರ ವಿಭಾಗದಲ್ಲಿ 10 ನೇ ತರಗತಿಯ ಶುಭಂ ಶೆಟ್ಟಿ ವೈಯಕ್ತಿಕ ಚಾಂಪಿಯನ್ ಶಿಪ್‌ನ್ನು ಪಡೆದುಕೊಂಡಿರುತ್ತಾರೆ.

- Advertisement -

Related news

error: Content is protected !!