


ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಹಾವೇರಿಯಲ್ಲಿ ಖಾಕಿ ಕೈಗೆ ಸಿಕ್ಕಿಬಿದ್ದಿದ್ದಾನೆ.
ರಾಜಸ್ತಾನ ಮೂಲದ ಬಿಕಾರಾಮ್ನನ್ನು ಹಾವೇರಿಯಲ್ಲಿ ಬಂಧಿಸಲಾಗಿದೆ.
ಮುಂಬೈ ಪೊಲೀಸರ ಮಾಹಿತಿ ಮೇರೆಗೆ ಹಾವೇರಿ ಪೊಲೀಸರು ಕಾರ್ಯಚರಣೆ ನಡೆಸಿ ಬಿಕಾರಾಮ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಮುಂಬೈ ಪೊಲೀಸರಿಗೆ ಒಪ್ಪಿಸಿದ್ದಾರೆ.
ಅರೋಪಿ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ ಎನ್ನಲಾಗಿದೆ. ನಗರದಲ್ಲಿನ ಗೌಡರ ಓಣಿಯಲ್ಲಿ ರೂಮ್ವೊಂದರಲ್ಲಿ ಕೂಲಿಕಾರರೊಂದಿಗೆ ಈತ ಕೂಡ ವಾಸವಾಗಿದ್ದ ಎನ್ನಲಾಗಿದೆ.
ಸೋಮವಾರ (ನ.4) ತಡರಾತ್ರಿ ವರ್ಲಿ ಪ್ರದೇಶದಲ್ಲಿರುವ ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆದರಿಕೆ ಸಂದೇಶ ಬಂದಿದ್ದು, 5 ಕೋಟಿ ಕೊಡಿ ಇಲ್ಲವೇ ಕೃಷ್ಣಮೃಗ ಬೇಟೆಯಾಡಿದಕ್ಕೆ ಬಿಷ್ಣೋಯ್ ಸಮುದಾಯದ ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಿ’, ತಪ್ಪಿದರೆ ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲಾಗುವುದು. ನಮ್ಮ ಗ್ಯಾಂಗ್ ಇನ್ನೂ ಸಕ್ರೀಯವಾಗಿದೆ’ ಎಂದು ಬೆದರಿಕೆ ಸಂದೇಶದಲ್ಲಿ ಉಲ್ಲೇಖವಾಗಿತ್ತು. ಅಲ್ಲದೇ ಬೆದರಿಕೆಯೊಡ್ಡಿದ ವ್ಯಕ್ತಿ ತಾನು ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಹೋದರ ಎಂದು ಹೇಳಿಕೊಂಡಿದ್ದ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮುಂಬೈ ಪೊಲೀಸರು, ಬೆದರಿಕೆ ಒಡ್ಡಿದವರ ಪತ್ತೆಗೆ ಬಲೆ ಬೀಸಿದ್ದರು.