Saturday, June 28, 2025
spot_imgspot_img
spot_imgspot_img

ಇಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

- Advertisement -
- Advertisement -

ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಇಂದು ನಡೆಯುತ್ತಿದೆ. ಅಭ್ಯರ್ಥಿಗಳ ವಿವರ, ಕ್ಷೇತ್ರವಾರು ಜಾತಿ ಲೆಕ್ಕಾಚಾರ ಹಾಗೂ ಇತರ ಸಮಗ್ರ ಮಾಹಿತಿ ಇಲ್ಲಿದೆ. ಇಂದು ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ, ಕಾಂಗ್ರೆಸ್‌ನಿಂದ ಸಿಪಿ ಯೋಗೇಶ್ವರ್‌ ಹಾಗೂ 32 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್‌ ಬೊಮ್ಮಾಯಿ ಕಣದಲ್ಲಿದರೆ, ಕಾಂಗ್ರೆಸ್‌ನಿಂದ ಯಾಸೀರ್‌ ಖಾನ್‌ ಪಠಾಣ್ ಸೇರಿ ಅಂತಿಮ ಕಣದಲ್ಲಿರುವ 8 ಅಭ್ಯರ್ಥಿಗಳಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಹಾಗೂ ಬಿಜೆಪಿಯ ಬಂಗಾರು ಹನುಮಂತು ನಡುವೆ ನೇರಾ ಹಣಾಹಣಿ ನಡೆದಿದೆ. ಒಟ್ಟಾರೆ 7 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ.

- Advertisement -

Related news

error: Content is protected !!