

ಜಿಲ್ಲೆಯಾದ್ಯಂತ ಮಾದಕವಸ್ತು ಸೇವನೆ/ಮಾರಾಟ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ಮಾನ್ಯ ಪೊಲೀಸ್ ಅಧೀಕ್ಷಕರ ಸೂಚನೆಯ ಮೇರೆಗೆ, ಆಯಾ ಠಾಣಾ ವ್ಯಾಪ್ತಿಗಳಲ್ಲಿ ವಿಶೇಷ ಕಾರ್ಯಾಚರಣೆಯಲ್ಲಿ ಸುಳ್ಯ, ಕಡಬ, ಹಾಗೂ ಬೆಳ್ತಂಗಡಿಯಲ್ಲಿ 2 ಪ್ರತ್ಯೇಕ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಮದ್ಯ ವಶಕ್ಕೆ ಪಡೆದುಕೊಂಡಿದ್ದಾರೆ.
ಸುಳ್ಯ: ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ತುಂಬಿದ ಸ್ಯಾಚೇಟ್ ಪ್ಯಾಕೇಟ್ಗಳನ್ನು ಸಂಗ್ರಹ ಮಾಡಿಕೊಂಡು ಮಾರಾಟ ಅರಂತೋಡು ಗ್ರಾಮದ ಅರಂತೋಡು ಪೇಟೆಯ ಅಡ್ಕಬಳೆ ಎಂಬಲ್ಲಿ ನಡೆದಿದೆ. ಆರೋಪಿಯನ್ನು ದಿನೇಶ್ ಕೆ(46) ಎಂದು ಗುರುತಿಸಲಾಗಿದೆ. ನ.23 ರಂದು ರಾತ್ರಿ 9:00 ಗಂಟೆಗೆ ಅರಂತೋಡು ಗ್ರಾಮದ ಅರಂತೋಡು ಪೇಟೆಯ ಅಡ್ಕಬಳೆ ರಸ್ತೆಯ ಗುಳಿಗರಾಜ ಚಿಕನ್ ಸೆಂಟರ್ ಎಂಬ ಹೆಸರಿನ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ತುಂಬಿದ ಸ್ಯಾಚೇಟ್ ಪ್ಯಾಕೇಟ್ಗಳನ್ನು ಸಂಗ್ರಹ ಮಾಡಿಕೊಂಡು ಮಾರಾಟ ಮಾಡುತ್ತಿರುವುದಾಗಿ ಬಂದ ಮಾಹಿತಿ ಮೇರೆಗೆ ಸುಳ್ಯ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸಂತೋಷ್ ಬಿ ಪಿ ರವರು ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದಾಗ ಆರೋಪಿ ದಿನೇಶ್ ಕೆಎಂಬಾತ ಕಾನೂನು ಬಾಹಿರವಾಗಿ ರೂ 1760/- ಮೌಲ್ಯದ 3.960 ಲೀಟರ್ (90 ಎಂ ಎಲ್ನ 44 ಮದ್ಯದ ಸ್ಯಾಚೆಟ್ ಗಳು) ಮದ್ಯವನ್ನು ಅಂಗಡಿಯಲ್ಲಿ ಶೇಖರಿಸಿಕೊಂಡಿರುವುದು ಕಂಡುಬಂದಿರುತ್ತದೆ. ಈ ಮದ್ಯದ ಸ್ಯಾಚೆಟ್ಗಳನ್ನು ವಶಕ್ಕೆ ಪಡೆದು, ಆರೋಪಿ ದಿನೇಶ್ ಕೆ ಹಾಗೂ ಕಾನೂನು ಬಾಹಿರವಾಗಿ ಮದ್ಯವನ್ನು ಮಾರಾಟ ಮಾಡಿರುವ ವೈನ್ ಶಾಪ್ನ ಮಾಲಕನ ವಿರುದ್ದ ಕಲಂ 32, 34 ಕರ್ನಾಟಕ ಅಬಕಾರಿ ಕಾಯ್ದೆ 1965 ಪ್ರಕಾರ ಪ್ರಕರಣ ದಾಖಲಿಸಲಾಗಿರುತ್ತದೆ.
ಕಡಬ: ವ್ಯಕ್ತಿಯೋರ್ವ ಸಾರ್ವಜನಿಕ ಸ್ಥಳದಲ್ಲಿ ಮಧ್ಯಪಾನ ಮಾಡುತ್ತಿದ್ದ ಘಟನೆ ಕಡಬ ಕಸಬ ಸಂತೆ ಕಟ್ಟೆ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಸುರೇಶ (50) ಎಂದು ಗುರುತಿಸಲಾಗಿದೆ. ನ.23 ರಂದು ರಾತ್ರಿ ಕಡಬ ಕಸಬ ಸಂತೆ ಕಟ್ಟೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಧ್ಯಪಾನ ಮಾಡುತ್ತಿದ್ದ ಆರೋಪಿ ಸುರೇಶ ಎಂಬಾತನ ವಿರುದ್ದ ಕಡಬ ಪೊಲೀಸು ಠಾಣೆಯಲ್ಲಿ ಅ.ಕ್ರ: 102/2024 ಕಲಂ:15A KARNATAKA EXCISE ACTರಂತೆ ಪ್ರಕರಣ ದಾಖಲಿಸಲಾಗಿರುತ್ತದೆ ಹಾಗೂ ಆತ ಸೇವಿಸುತ್ತಿದ್ದ ಮದ್ಯವನ್ನು ಮುಂದಿನ ಕಾನೂನುಕ್ರಮಕ್ಕಾಗಿ ಸ್ವಾದೀನಪಡಿಸಲಾಗಿದೆ.
ಬೆಳ್ತಂಗಡಿ: ಸಾರ್ವಜನಿಕ ಬಸ್ ಪ್ರಯಾಣಿಕರ ತಂಗುದಾಣದ ಬಳಿ ಮಧ್ಯಪಾನ ಮಾಡುತ್ತಿದ್ದ ಘಟನೆ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಕಲ್ಲಾಜೆ ಗುಡ್ಡೆ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಬೆಳಿಯಪ್ಪ ಗೌಡ (58) ಎಂದು ಗುರುತಿಸಲಾಗಿದೆ. ನ. 24 ರಂದು ಸಂಜೆ ವೇಳೆ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಕಲ್ಲಾಜೆ ಗುಡ್ಡೆ ಎಂಬಲ್ಲಿ ಸಾರ್ವಜನಿಕ ಬಸ್ ಪ್ರಯಾಣಿಕರ ತಂಗುದಾಣದ ಬಳಿ ಮಧ್ಯಪಾನ ಮಾಡುತ್ತಿದ್ದ ಆರೋಪಿ ಬೆಳಿಯಪ್ಪ ಗೌಡ ಎಂಬಾತ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 126/2024, ಕಲಂ 15(A),32(3) KE Act ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ ಹಾಗೂ ಆತ ಸೇವಿಸುತ್ತಿದ್ದ ಮದ್ಯವನ್ನು ಮುಂದಿನ ಕಾನೂನುಕ್ರಮಕ್ಕಾಗಿ ಸ್ವಾದೀನಪಡಿಸಲಾಗಿದೆ.
ಬೆಳ್ತಂಗಡಿ: ಬಸ್ ನಿಲ್ದಾಣದ ಒಳಗಡೆ ಇಬ್ಬರು ವ್ಯಕ್ತಿಗಳು ಮದ್ಯ ಸೇವನೆ ಮಾಡುತ್ತಿದ್ದ ಘಡನೆ ಬೆಳ್ತಂಗಡಿ ತಾಲೂಕು ಕಳಿಯಾ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಸತೀಶ್ ಕುಮಾರ್ ಎಂದು ಗುರುತಿಸಲಾಗಿದೆ. ನ.24 ರಂದು ಸಂಜೆ ಬೆಳ್ತಂಗಡಿ ತಾಲೂಕು ಕಳಿಯಾ ಗ್ರಾಮದ ಗೇರುಕಟ್ಟೆ ಬಸ್ ನಿಲ್ದಾಣದ ಒಳಗಡೆ ಇಬ್ಬರು ವ್ಯಕ್ತಿಗಳು ಮದ್ಯ ಸೇವನೆ ಮಾಡುತ್ತಿದ್ದು, ಯಲ್ಲಪ್ಪ ಹೆಚ್. ಮಾದಾರ್ ಪೊಲೀಸ್ ಉಪ ನಿರಿಕ್ಷಕರು, (ತನಿಖೆ)ಬೆಳ್ತಂಗಡಿ ಪೊಲೀಸ್ ಠಾಣೆರವರು ಸ್ಥಳಕ್ಕೆ ತೆರಳಿ ಆರೋಪಿ ಸತೀಶ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದು, ಇನ್ನೋರ್ವ ವ್ಯಕ್ತಿಯು ಓಡಿ ತಪ್ಪಿಸಿಕೊಂಡಿರುತ್ತಾನೆ. ಆರೋಪಿಗಳು ಸಾರ್ವಜನಿಕ ಸ್ಥಳದಲ್ಲಿ ಸೇವಿಸುತ್ತಿದೆ ಮದ್ಯವನ್ನು ಸ್ವಾಧೀನಪಡಿಕೊಂಡು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 94/2024 ಕಲಂ;15(ಎ)32(3) ಅಬಕಾರಿ ಕಾಯ್ದೆ ಯಡಿ ಪ್ರಕರಣ ದಾಖಲಿಸಲಾಗಿದೆ.