Friday, June 27, 2025
spot_imgspot_img
spot_imgspot_img

ಮುಲ್ಕಿ: ಕಾರ್ತಿಕ್ ಭಟ್ ಆತ್ಮಹತ್ಯೆ ಪ್ರಕರಣ; ತಾಯಿ ಮತ್ತು ಅಕ್ಕನಿಗೆ ಜಾಮೀನು ಮಂಜೂರು..!

- Advertisement -
- Advertisement -

ಮುಲ್ಕಿ: ಇತ್ತೀಚೆಗೆ ಮುಲ್ಕಿ ಪಕ್ಷಿಕೆರೆಯಲ್ಲಿ ನಡೆದ ಕಾರ್ತಿಕ್ ಭಟ್ ಆತ್ಮಹತ್ಯೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇರಣೆ ನೀಡಿದ ಯತ್ನದಲ್ಲಿ ಅರೆಸ್ಟ್ ಆಗಿದ್ದ ಕಾರ್ತಿಕ್ ಭಟ್ ತಾಯಿ ಶ್ಯಾಮಲ ಹಾಗೂ ಸಹೋದರಿ ಕಣ್ಮಣಿ ರಾವ್‌‌‌ ವಿಚಾರಣೆ ಶನಿವಾರ ನಡೆದಿದ್ದು ಆರೋಪಿಗಳಿಗೆ ದ.ಕ ಜಿಲ್ಲಾ ಸೆಶನ್ಸ್ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.

ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್(32) ತನ್ನ ಪತ್ನಿ ಪ್ರಿಯಾಂಕಾ(28) ಮತ್ತು ನಾಲ್ಕು ವರ್ಷದ ಮಗು ಹೃದಯ್ ಎಂಬವರನ್ನು ಕೊಲೆ ಮಾಡಿ ಬಳಿಕ ತಾನು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ನವೆಂಬರ್ 9ರಂದು ಪ್ರಕರಣ ಬೆಳಕಿಗೆ ಬಂದಿತ್ತು. ಡೆತ್‌ನೋಟ್‍ನಲ್ಲಿ ಘಟನೆಗೆ ತನ್ನ ತಾಯಿ ಮತ್ತು ಸಹೋದರಿಯ ಕಿರುಕುಳ ಕಾರಣವೆಂದು ಪ್ರಸ್ತಾಪಿಸಿದ್ದ. ಈ ಬಗ್ಗೆ ಮುಲ್ಕಿ ಪೊಲೀಸರು ಕಾರ್ತಿಕ್ ಭಟ್‍ನ ಪತ್ನಿ ಪ್ರಿಯಾಂಕಾಳ ತಾಯಿ ನೀಡಿದ ದೂರಿನ ಆಧಾರದಲ್ಲಿ ಕಾರ್ತಿಕ್‍ನ ತಾಯಿ ಶ್ಯಾಮಲ ಭಟ್ ಮತ್ತು ಮಗಳು ಕಣ್ಮಣಿಯನ್ನು ಬಂಧಿಸಿ ಮೂಡುಬಿದಿರೆ ಕೋರ್ಟ್‍ಗೆ ಹಾಜರುಪಡಿಸಿದ್ದು ಕೋರ್ಟ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ಹದಿನೈದು ದಿನಗಳ ಬಳಿಕ ಮಂಗಳೂರಿನ ನಾಲಕ್ಕನೇ ಜಿಲ್ಲಾ ಸೆಶನ್ಸ್ ನ್ಯಾಯಾಲಯ ಆರೋಪಿಗಳಿಗೆ ಶರತ್ತುಗಳ ಅನ್ವಯ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ವಕೀಲ ಶರತ್‌ ಶೆಟ್ಟಿ ವಾದಿಸಿದ್ದರು.

- Advertisement -

Related news

error: Content is protected !!