- Advertisement -
- Advertisement -


ಚಾಮರಾಜನಗರ: ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದವನನ್ನು ಚಾಮರಾಜನಗರದಲ್ಲಿ ಪೊಲೀಸರು ಬಂಧಿಸಿದ್ದು, ಹುಲಿ ಉಗುರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಚಾಮರಾಜನಗರ ತಾಲೂಕು ಬೂದಿಪಡಗ ಗ್ರಾಮದ ಚಿಕ್ಕಮಾದ ಎಂದು ಗುರುತಿಸಲಾಗಿದೆ.
ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಪುಣಜನೂರು ವನ್ಯಜೀವಿ ವಲಯದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈ ಬಗ್ಗೆ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ.
- Advertisement -








