- Advertisement -
- Advertisement -





ಉಡುಪಿ: ಕಾರು ಪಲ್ಟಿಯಾಗಿ ಹಿರಿಯ ನಾಗರಿಕರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಕಡಿಯಾಳಿಯಲ್ಲಿ ನಡೆದಿದೆ.
ಕೆ ಎ 19 ನೋಂದಣಿಯ ಸ್ವಿಫ್ಟ್ ಕಾರು ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿತ್ತು. ಕಡಿಯಾಳಿ ಬಳಿ ಅತಿ ವೇಗದಲ್ಲಿ ಕಾರು ಚಲಿಸುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ದಿಢೀರ್ ಬ್ರೇಕ್ ಹಾಕಿದ್ದರಿಂದ ಸ್ವಿಫ್ಟ್ ಕಾರು ಪಲ್ಟಿಯಾಗಿದೆ.
ಈ ವೇಳೆ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ದಾಟಲು ಕಾಯುತ್ತಿದ್ದ ಹಿರಿಯ ನಾಗರಿಕರಿಗೆ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದಾಗ ಹಿರಿಯ ನಾಗರಿಕರು ತಮ್ಮ ದ್ವಿಚಕ್ರ ವಾಹನದಲ್ಲಿ ರಸ್ತೆ ದಾಟಲು ಹೊರಟಿದ್ದರು ಎಂದು ವರದಿಯಾಗಿದೆ. ಉಡುಪಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -