




ಬುಡೋಳಿ: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ವೇಳೆ ಹಗ್ಗ ಸಿಲುಕಿ ಬಾಲಕಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ
ಮೃತಪಟ್ಟ ಬಾಲಕಿಯನ್ನು ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ (8) ಎಂದು ಗುರುತಿಸಲಾಗಿದೆ.
ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆಗೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಈ ಘಟನೆ ನಡೆದಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ ಬಳಿಕ ತನಿಖೆಯಲ್ಲಿ ಇದು ಆಕಸ್ಮಿಕ ಅಲ್ಲ ಆತ್ಮಹತ್ಯೆ ಎಂದು ತಿಳಿದು ಬಂದಿದೆ.
ಕಿಶೋರ್ ಎಂಬವರ ಪುತ್ರಿ ತಿರ್ಥಶ್ರೀ ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಮದಕ ಮನೆಯಲ್ಲಿ ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಡಿ.8 ರಂದು ಸಂಜೆ 5.00 ಗಂಟೆಯಿಂದ ರಾತ್ರಿ 7.30 ಗಂಟೆಯ ಮಧ್ಯದ ಅವಧಿಯಲ್ಲಿ ಬಟ್ಟೆ ಹಾಕಲು ಹಾಕಿದ ಸ್ಟೀಲ್ ರಾಡ್ಗೆ ಚಡ್ಡಿಯ ಲಾಡಿ (ಹಗ್ಗದಿಂದ) ಕುಣಿಕೆ ಮಾಡಿ ಒಂದು ತುದಿಯನ್ನು ಸ್ಟೀಲ್ ರಾಡ್ಗೂ ಮತ್ತೊಂದು ತುದಿಯನ್ನು ಕುತ್ತಿಗೆ ಹಾಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಇದು ಆತ್ಮಹತ್ಯೆ ಅನ್ನುದರಲ್ಲಿ ಮನೆಯವರಿಗೆ ಯಾವುದೇ ಸಂಶಯವಿರುವುದಿಲ್ಲ ಎಂದು ಮನೆಯವರು ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.