Sunday, June 29, 2025
spot_imgspot_img
spot_imgspot_img

ಸಕಲೇಶಪುರ: ಹೃದಯಾಘಾತದಿಂದ ಯುವಕ ಮೃತ್ಯು..!

- Advertisement -
- Advertisement -

ಸಕಲೇಶಪುರ: ಸಾಫ್ಟ್‌‌‌ವೇರ್ ಇಂಜಿನಿಯರ್ ಹೃದಯಾಘಾತದಿಂದ ಮೃತಪಟ್ಟ ಘಟನೆಸಕಲೇಶಪುರದ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಸಮರ್ಥ್ (26) ಎಂದು ಗುರುತಿಸಲಾಗಿದೆ.

ಕಾಫಿ ಬೆಳೆಗಾರ ಹೇಮಂತ್ ಹಾಗೂ ಸರಳ ಎಂಬುವವರ ಪುತ್ರ ಸಮರ್ಥ್‌ ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲ ತಿಂಗಳುಗಳಿಂದ ವರ್ಕ್ ಫ್ರಮ್‌‌ ಹೋಂ ಮಾಡುತ್ತಿದ್ದ ಸಮರ್ಥ್ ಭಾನುವಾರ ಬೆಳಗ್ಗೆಯವರೆಗೂ ಕೆಲಸ ಮಾಡಿ ಮಲಗಿದ್ದರು. ಸಂಜೆ ಮೇಲೆದ್ದು ನೀರು ಕುಡಿದ ಸಮರ್ಥ್ ತಕ್ಷಣವೇ ಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಸಮರ್ಥ್ ತಾಯಿ ಪತಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದು ಮನೆಗೆ ಬಂದ ವೈದ್ಯರು ಸಮರ್ಥ್ ತಪಾಸಣೆ ನಡೆಸಿದ್ದಾರೆ. ಅಷ್ಟರಲ್ಲಿ ಹೃದಯಾಘಾತದಿಂದ ಸಮರ್ಥ್ ಕೊನೆಯುಸಿರೆಳೆದಿದ್ದರು.

- Advertisement -

Related news

error: Content is protected !!