Sunday, June 29, 2025
spot_imgspot_img
spot_imgspot_img

ಶಬರಿಮಲೆ ದೇಗುಲದ ಸ್ಕೈವಾಕ್‌ನಿಂದ ಜಿಗಿದು ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆ..!

- Advertisement -
- Advertisement -

ರಾಮನಗರ: ಶಬರಿಮಲೆ ದೇಗುಲದ ಸ್ಕೈವಾಕ್ ಮೇಲಿಂದ ಬಿದ್ದು ಅಯ್ಯಪ್ಪ ಭಕ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಭಕ್ತ ಕನಕಪುರದ ಮದ್ದೂರಮ್ಮ ಬೀದಿ ನಿವಾಸಿ ಕುಮಾರ್ (40) ಎಂದು ಗುರುತಿಸಲಾಗಿದೆ.

ಮೃತ ಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದರು. ಮೂರು ದಿನದ ಹಿಂದೆ ಕುಮಾರ್ ಸೇರಿ 6 ಮಂದಿ ಶಬರಿಮಲೆಗೆ ತೆರಳಿದ್ದರು. ಅಯ್ಯಪ್ಪನ ದರ್ಶನ ಪಡೆದ ಬಳಿಕ ದೇವಾಲಯದ ಸ್ಕೈವಾಕ್ ಶೆಲ್ಟರ್ ಮೇಲಿನಿಂದ ಜಿಗಿದು ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ದೇವಾಲಯದ ಮೇಲಿಂದ ಜಿಗಿಯುವ ದೃಶ್ಯ ಭಕ್ತರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಅಯ್ಯಪ್ಪ ಮಾಲಾಧಾರಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಕುಮಾರ್‌ಗೆ ಶಬರಿಮಲೆ ಸನ್ನಿಧಾನದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊಟ್ಟಾಯಂ ಮೆಡಿಕಲ್ ಕಾಲೇಜಿಗೆ ರವಾನೆ ಮಾಡುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಬಗ್ಗೆ ಶಬರಿಮಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!