- Advertisement -
- Advertisement -





ಬೀದರ್ : ಬೈಕ್ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟಿದ್ದು, ಮೂವರಿಗೆ ಗಾಯವಾದ ಘಟನೆ ಭಾಲ್ಕಿ ತಾಲ್ಲೂಕಿನ ಬಸವನಗರ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟ ಯುವಕ ದಾಡಗಿ ಗ್ರಾಮದ ಮಹಾದೇವ್ ಬಿರಾದಾರ್ (25) ಎಂದು ಗುರುತಿಸಲಾಗಿದೆ.
ಮಹಾದೇವ್ ಬಿರಾದಾರ್ ಭಾಲ್ಕಿಯಿಂದ ದಾಡಗಿ ಕಡೆಗೆ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಾದೇವನನ್ನು ಭಾಲ್ಕಿಯ ಸರಕಾರಿ ಆಸ್ಪತ್ರೆಗೆ ಕರೆದೋಯ್ದು ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ನ ಗುರುನಾನಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಇನ್ನು ಉಳಿದ ಮೂವರಿಗೆ ಗಾಯಗಳಾಗಿದ್ದು, ಭಾಲ್ಕಿಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -