- Advertisement -
- Advertisement -




ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕೊಕ್ಕಡ ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳ ಪೊಲೀಸ್ ಠಾಣಾ ಅ ಕ್ರ 72/2024 ಕಲಂ:305 ಬಿ ಎನ್ ಎಸ್ ರಂತೆ ದಾಖಲಾಗಿದ್ದು, ಪ್ರಕರಣದಲ್ಲಿ ಬೆಳ್ತಂಗಡಿ ಗ್ರಾಮಾಂತರ ವೃತ್ತನಿರೀಕ್ಷಕರ ನೇತೃತ್ವದ ಧರ್ಮಸ್ಥಳ ಪೊಲೀಸ್ ಠಾಣಾ ಅಧಿಕಾರಿ/ ಸಿಬ್ಬಂದಿಗಳ ತನಿಖಾ ತಂಡವು ಡಿ: 30 ರಂದು ಆರೋಪಿತರುಗಳಾದ ಮಹಮ್ಮದ್ ಇಕ್ಬಾಲ್ ಮತ್ತು ಮಹಮ್ಮದ್ ಶಹಬಾದ ಎಂಬವರುಗಳನ್ನು ಬಾಡಿ ವಾರೆಂಟ್ ನಲ್ಲಿ ಪೊಲೀಸ್ ವಶಕ್ಕೆ ಪಡೆದು, ಪ್ರಕರಣದ ತನಿಖೆಯನ್ನು ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದು, ಅವರುಗಳಿಂದ ರೂ 20000/- ಹಣವನ್ನು ಸ್ವಾದೀನಪಡಿಸಿಕೊಂಡಿರುತ್ತಾರೆ. ಸದ್ರಿ ಆರೋಪಿತರುಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿತರುಗಳಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿ ಆದೇಶಿಸಿರುತ್ತದೆ
- Advertisement -








