Sunday, June 21, 2026
spot_imgspot_img
spot_imgspot_img

ಸಕಲೇಶಪುರ: ಖಾಸಗಿ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ

- Advertisement -
- Advertisement -

ಸಕಲೇಶಪುರ: ತಾಲೂಕಿನ ಶಿರಾಡಿ ಘಾಟ್ ರಸ್ತೆಯ, ಎತ್ತಿನಹಳ್ಳ ಬಳಿ ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ದಿಢೀರ್ ಬೆಂಕಿ ಕಾಣಿಸಿಕೊಂಡಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ.ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಸ್ಲಿಪಿಂಗ್ ಕೋಚ್ ಎಸಿ ಬಸ್‌ನಲ್ಲಿ ಸುಮಾರು 30 ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಇಂದು ಮುಂಜಾನೆ 5 ಗಂಟೆ ಸುಮಾರಿನಲ್ಲಿ ಶಿರಾಡಿಘಾಟ್ ರಸ್ತೆಯಲ್ಲಿ ತೆರಳುವಾಗ ಬಸ್‌ನ ಇಂಜಿನ್‌ನಲ್ಲಿ ಬೆಂಕಿ ಕಾಣಸಿಕೊಂಡಿದೆ ಎಂದು ತಿಳಿದು ಬಂದಿದೆ.ತಕ್ಷಣವೇ ಬಸ್ ನಿಲ್ಲಿಸಿದ ಚಾಲಕ ಯೋಗೀಶ್ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ. ನಂತರ ಇಡೀ ಬಸ್‌ಗೆ ಬೆಂಕಿ ವ್ಯಾಪಿಸಿದ್ದು, ರಸ್ತೆಯಲ್ಲಿಯೇ ಧಗಧಗನೆ ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ದಾವಿಸಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಖಾಸಗಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿತ್ತು.ಘಟನೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಬೇರೆ ವಾಹನದಲ್ಲಿ ತೆರಳಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

- Advertisement -

Related news

error: Content is protected !!