Saturday, August 8, 2026
spot_imgspot_img
spot_imgspot_img

ಪುತ್ತೂರು: ಗೋ ಸಂರಕ್ಷಣಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ಪುತ್ತೂರು : ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರ ಸ್ಥಾನವನ್ನು ಪಡೆಯುವ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎನ್ನುವ ಒತ್ತಾಯ ಈಗಾಗಲೇ ಇದೆ. ಆದರೆ ಗೋವನ್ನು `ರಾಷ್ಟ್ರೀಯ ಸಂಪತ್ತು’ ಎಂದು ಘೋಷಿಸುವಂತೆ ಆಗ್ರಹಿಸಬೇಕಾಗಿದೆ. ತಾಯಿ ಸಮಾನಾದ ಗೋವಿನ ಮೇಲೆ ಕ್ರೌರ್ಯ, ಮಾನಸಿಕತೆ ಪ್ರದರ್ಶಿಸುವವರು ಮನುಷ್ಯರೇ ಅಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಸಹ ಸೇವಾ ಪ್ರಮುಖ್ ನಾ. ಸೀತಾರಾಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಗೋಮಾತೆಯ ಕೆಚ್ಚಲು ಕತ್ತರಿಸಿದ ವಿಕೃತ ಮನಸ್ಸುಗಳನ್ನು ಖಂಡಿಸಿ ಪುತ್ತೂರು ಜಿಲ್ಲಾ ಗೋ ಸಂರಕ್ಷಣಾ ಸಮಿತಿ ವತಿಯಿಂದ ಸೋಮವಾರ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಬಳಿಕ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.ಮನುಷ್ಯರು ಮಾತ್ರವಲ್ಲದೆ ಸಸ್ಯಕೋಟಿಯನ್ನು ಸಂರಕ್ಷಿಸುವ ಮಾತೆ ಗೋವು. ಕ್ರೂರ ರಾಕ್ಷಸೀ ಪ್ರವೃತ್ತಿ ಹೊಂದಿರುವವರು ಮಾತ್ರ ಗೋವಿನ ಮೇಲೆ ದೌರ್ಜನ್ಯ ನಡೆಸಲು ಸಾಧ್ಯ. ಇದರ ವಿರುದ್ಧ ಹಿಂದೂಗಳು ಪರಿಹಾರ ಕಂಡುಕೊಳ್ಳುವ ಸಂಕಲ್ಪ ಮಾಡಬೇಕು. ಹಿಂದೂಗಳ ತಾಳ್ಮೆಯ ಕಟ್ಟೆಯೊಡೆದಾಗ ಅದರ ಪರಿಣಾಮ ಹೇಗಿರುತ್ತದೆ ಎಂಬುದನ್ನು ಎದುರಿಸಿದ ಹಿಂದೂ ವಿರೋಧಿಗಳಿಗೆ ಮತ್ತೆ ನೆನಪು ಮಾಡಬೇಕು ಎಂದು ಹೇಳಿದರು.

ಸಂಘಟನೆಯ ವಿಶಾಖ್ ಸಸಿಹಿತ್ತು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.ಪ್ರತಿಭಟನ ಮೆರವಣಿಗೆ ಆರಂಭದಲ್ಲಿ ನೆಲ್ಲಿಕಟ್ಟೆ ಖಾಸಗಿ ಬಸ್ಸು ನಿಲ್ದಾಣದ ಬಳಿ ಗೋ ಪೂಜೆ ನೆರವೇರಿಸುವ ಮೂಲಕ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬಳಿಕ ಮೆರವಣಿಗೆ ಹೊರಟು ಕೆ.ಎಸ್.ಆರ್.ಟಿ.ಸಿ. ನಿಲ್ದಾಣ, ಗಾಂಧಿಕಟ್ಟೆ, ಕೋರ್ಟು ರಸ್ತೆಯ ಮೂಲಕ ಸಾಗಿ ತಾಲೂಕು ಆಡಳಿತ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಸೇರಿದಂತೆ ಬಿಜೆಪಿ ಹಾಗೂ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡರು.

- Advertisement -

Related news

error: Content is protected !!