- Advertisement -
- Advertisement -


ಕಡಂಬು: ಖಾಸಗಿ ಬಸ್ಗೆ ಗೂಡ್ಸ್ ಆಪೆ ರಿಕ್ಷಾ ಡಿಕ್ಕಿ ಹೊಡೆದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಕಡಂಬು ಇಳಿಜಾರು ರಸ್ತೆಯಲ್ಲಿ ನಡೆದಿದೆ.
ವಿಟ್ಲದ ಕಡೆಗೆ ಹೋಗುತ್ತಿದ್ದ ಗೂಡ್ಸ್ ಆಪೆ ರಿಕ್ಷಾ ಚಾಲಕ ತೀರಾ ನಿರ್ಲಕ್ಷ್ಯದಿಂದ ಚಲಾಯಿಸಿದ್ದು ವಿಟ್ಲದಿಂದ ಮುಡಿಪು ಮಾರ್ಗವಾಗಿ ಮಂಗಳೂರಿಗೆ ಸಂಚರಿಸುವ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆಯಲು ಮುಂದಾಗಿದೆ. ಅಪಘಾತದ ಮುನ್ಸೂಚನೆ ಅರಿತ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಗೂಡ್ಸ್ ಆಪೆ ಚಾಲಕನ ಪ್ರಾಣ ಉಳಿಯುವಂತಾಗಿದೆ.
ಶರವೇಗದಲ್ಲಿ ಬಂದ ಆಪೆ ಗೂಡ್ಸ್ ವಾಹನವನ್ನು ತಪ್ಪಿಸುವ ಭರದಲ್ಲಿ ಬಸ್ ರಸ್ತೆ ಬದಿಯ ಧರೆಗೆ ಡಿಕ್ಕಿ ಹೊಡೆದಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅದೇ ಸಂದರ್ಭ ಗೂಡ್ಸ್ ವಾಹನದ ಬಾಡಿ ಕಳಚಿಕೊಂಡು ರಸ್ತೆ ಬಿದ್ದಿದೆ. ಇಂಜಿನ್ ಜೊತೆಗೆ ಚಾಲಕ ಬೇರ್ಪಟ್ಟಿದ್ದರೂ ಸಣ್ಣಪುಟ್ಟ ಗಾಯಗಳಾಗಿ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾನೆ. ಘಟನೆಯ ಬಗ್ಗೆ ಪ್ರತ್ಯಕ್ಷದರ್ಶಿ ಬಸ್ ಪ್ರಯಾಣಿಕರು ವಿವರವಾಗಿ ಹೇಳಿಕೆ ನೀಡಿದ್ದಾರೆ.
- Advertisement -