Saturday, June 28, 2025
spot_imgspot_img
spot_imgspot_img

ಹಂಪಿ ಉತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

- Advertisement -
- Advertisement -

ಬಳ್ಳಾರಿ,ನ(13): ಇಂದು ನಡೆಯಲಿರುವ ಹಂಪಿ ಉತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಸಂಜೆ ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆನಂದ್​ ಸಿಂಗ್​ ಉತ್ಸವಕ್ಕೆ  ಚಾಲನೆ ನೀಡಲಿದ್ದಾರೆ.ಪ್ರತೀ ವರ್ಷವೂ ಮೂರು ದಿನಗಳವರೆಗೆ ನಡೆಯುತ್ತಿದ್ದ ಹಂಪಿ ಉತ್ಸವ ವಿಜಯನಗರ ಸಾಮ್ರಾಜ್ಯದ ಕಾಲದ ಗತವೈಭವ ಸಾರುತ್ತಿತ್ತು.

ಆದರೆ ಈ ಬಾರಿ ಕೊರೊನಾ ಕಾರಣದಿಂದ ಸಾಂಕೇತಿವಾಗಿ, ಸರಳವಾಗಿ ನಡೆಸಲು ತೀರ್ಮಾನಿಸಲಾಗಿದೆ. ಇಂದು ಒಂದೇ ದಿನ ಉತ್ಸವ ನಡೆಯಲಿದೆ.ಉತ್ಸವ ಹಿನ್ನಲೆ ಹಂಪಿಯ ಉದ್ದಾನ ವೀರಭದ್ರೇಶ್ವರ ದೇವಸ್ಥಾನದಿಂದ ವಿರೂಪಾಕ್ಷೇಶ್ವರ ದೇವಸ್ಥಾನದವರೆಗೆ ಜನಪದ ಕಲಾತಂಡಗಳ‌ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ.

ಅದರ ನಂತರ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನದ ಪಕ್ಕದಲ್ಲಿ ಹರಿಯುವ ತುಂಗಾಭದ್ರಾ ನದಿ ದಡದಲ್ಲಿ ತುಂಗಾ ಆರತಿ‌ನಡೆಯಲಿದೆ. ಆದರೆ ಈ ಬಾರಿ ವೇದಿಕೆ ಕಾರ್ಯಕ್ರಮಗಳನ್ನು ರದ್ದುಮಾಡಲಾಗಿದೆ.

- Advertisement -

Related news

error: Content is protected !!