Sunday, June 29, 2025
spot_imgspot_img
spot_imgspot_img

ಕುಂದಾಪುರ: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!

- Advertisement -
- Advertisement -

ಕುಂದಾಪುರ: ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜನವರಿ 28ರಂದು ಕಾಸರಗೋಡಿನಲ್ಲಿ ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಮುಂಬೈ ಮಹಾರಾಷ್ಟ್ರದ ನಿವಾಸಿ ಬಿ ಅಬ್ದುಲ್ಲಾ ಎಂಬವರ ಪುತ್ರ ಮೊಹಮ್ಮದ್ ಹನೀಫ್ ಎಂದು ಗುರುತಿಸಲಾಗಿದೆ.

ಆರೋಪಿಯು ಜಾಮೀನಿನ ಮೇಲೆ ಬಿಡುಗಡೆಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಪರಿಣಾಮವಾಗಿ, ನ್ಯಾಯಾಲಯವು ಅವರ ವಿರುದ್ಧ LPC ವಾರಂಟ್ ಹೊರಡಿಸಿತು.

ಜನವರಿ 28 ರಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ ನೂತನ್ ಡಿ, ಸಿಬ್ಬಂದಿಗಳಾದ ಹೆಚ್.ಸಿ.ರಾಜು ಮತ್ತು ಹೆಚ್.ಸಿ ಅಶೋಕ್ ಶೆಟ್ಟಿ ಅವರು ಮೊಹಮ್ಮದ್ ಹನೀಫ್ ಅವರನ್ನು ಕೇರಳದ ಕಾಸರಗೋಡಿನಲ್ಲಿ ಯಶಸ್ವಿಯಾಗಿ ಪತ್ತೆಹಚ್ಚಿ ಬಂಧಿಸಿದ್ದರು.ಮುಂದಿನ ವಿಚಾರಣೆಗಾಗಿ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

- Advertisement -

Related news

error: Content is protected !!