Friday, June 27, 2025
spot_imgspot_img
spot_imgspot_img

‘ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ನಾಳೆ ಕ್ಯಾಬಿನೆಟ್‌ನಲ್ಲಿ ಸುಗ್ರೀವಾಜ್ಞೆ ಜಾರಿ’- ಪರಮೇಶ್ವರ್‌

- Advertisement -
- Advertisement -

ಬೆಂಗಳೂರು: ನಾಳೆ ನಡೆಯುವ ಕ್ಯಾಬಿನೆಟ್‌ನಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಹೊಸ ಕಾನೂನು ತರಲಿದ್ದು, ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಸಿಎಂ ಸಭೆ ಬಳಿಕವೂ ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕಿರುಕುಳ ಆದರೆ ಪೊಲೀಸರಿಗೆ ದೂರು ಕೊಡಬೇಕು.ಪೊಲೀಸರು ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ. ಮೊನ್ನೆ ನಡೆದ ಸಭೆಯಲ್ಲಿ ಪೊಲೀಸರು ಇಂತಹ ಕೇಸ್ ಬಗ್ಗೆ ಸುಮೋಟೋ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದೇವೆ.

ಇವತ್ತು ಮೈಕ್ರೋ ಫೈನಾನ್ಸ್ ಕಾನೂನು ಮಾಡುವ ಬಗ್ಗೆ ಸಭೆ ಕರೆದಿದ್ದೇವೆ. ಇವತ್ತು ಬಿಲ್ ಬಗ್ಗೆ ನಾನು, ಕಾನೂನು ಸಚಿವರು, ಕಂದಾಯ ಸಚಿವರು ಸಭೆ ಮಾಡಿ ಬಿಲ್ ಅಂತಿಮ ಮಾಡುತ್ತೇವೆ. ನಾಳೆಯ ಕ್ಯಾಬಿನೆಟ್ ನಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಕ್ರಮ ತೆಗೆದುಕೊಂಡು ರಾಜ್ಯಪಾಲರಿಗೆ ಕಳಿಸ್ತೀವಿ ಅಂತ ತಿಳಿಸಿದರು.

ಈಗಾಗಲೇ ಎಸ್‌- ಡಿಸಿ ಗಳ ಸಭೆ ಮಾಡಿ ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದೇವೆ. ಸಹಾಯವಾಣಿ ಕೂಡಾ ಪ್ರಾರಂಭ ಮಾಡಿದ್ದೇವೆ. ಜಿಲ್ಲಾಧಿಕಾರಿಗಳಿಗೆ ಅಧಿಕಾರ ಕೊಡುವುದು ಮತ್ತು ಇದಕ್ಕಾಗಿ ಒಂದು ಪ್ರತ್ಯೇಕ ವಿಂಗ್ ಪ್ರಾರಂಭ ಮಾಡೋದು ಬಿಲ್ ನಲ್ಲಿ ಸೇರಿಸಿದ್ದೇವೆ ಎಂದರು.

- Advertisement -

Related news

error: Content is protected !!