Saturday, September 12, 2026
spot_imgspot_img
spot_imgspot_img

ದ.ಕ. ಟೆಲಿಕಾಂ ಸಲಹಾ ಸಮಿತಿಗೆ 8 ಮಂದಿ ಸದಸ್ಯರ ನೇಮಕ

- Advertisement -
- Advertisement -

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಶಿಫಾರಸಿನ ಮೇರೆಗೆ ಭಾರತ್ ಸಂಚಾರ ನಿಗಮ ಲಿಮಿಟೆಡ್(ಬಿಎಸ್‌ಎನ್‌ಎಲ್)ನ ದಕ್ಷಿಣ ಕನ್ನಡ ಜಿಲ್ಲೆ ಟೆಲಿಕಾಂ ಸಲಹಾ ಸಮಿತಿಗೆ 8 ಮಂದಿ ಸದಸ್ಯರನ್ನು ನೇಮಕಗೊಳಿಸಿ ದೂರ ಸಂಪರ್ಕ ಸಚಿವಾಲಯವು ಆದೇಶ ಹೊರಡಿಸಿದೆ.ಕೊರಗಪ್ಪ ನಾಯ್ಕ ಮುಂಡಾಜೆ, ಚರಣ್ ರಾಜ್ ಉಳ್ಳಾಲ್, ಟಿ. ಜಯಂತ್ ಸಾಲ್ಯಾನ್ ತೋಕೂರು, ಕೆ. ರಾಮ ಕೊಂಚಾಡಿ, ಪೂರ್ಣಿಮ ರಾವ್, ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ರಾಮಕೃಷ್ಣ ಭಟ್ ಬೆಳ್ಳಾರೆ, ನಿತೀಶ್ ಕುಮಾರ್ ಶಾಂತಿವನ ಅವರನ್ನು ನೇಮಕಗೊಳಿಸಲಾಗಿದೆ.

ಈ ನಾಮನಿರ್ದೇಶಿತ ಸದಸ್ಯರ ಅಧಿಕಾರವಧಿಯು 2026ರ ಜುಲೈ 13ಕ್ಕೆ ಕೊನೆಗೊಳ್ಳುತ್ತದೆ. ಬಿಎಸ್‌ಎನ್‌ಎಲ್ಲ ಮಂಗಳೂರು ವಲಯದ ಪ್ರಧಾನ ಮಹಾ ಪ್ರಬಂಧಕರು ಈ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುತ್ತದೆ ಎಂದು ಭಾರತೀಯ ಟೆಲಿಕಾಂ ಸಚಿವಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.ನೂತನವಾಗಿ ನೇಮಕಗೊಂಡಿರುವ ಜಿಲ್ಲೆಯ ಎಂಟು ಮಂದಿ ಸದಸ್ಯರನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಅಭಿನಂದಿಸಿದ್ದಾರೆ.

- Advertisement -

Related news

error: Content is protected !!