Saturday, June 28, 2025
spot_imgspot_img
spot_imgspot_img

ವಿಟ್ಲ: ಬಂಟ್ವಾಳ ಪ್ರಾದೇಶಿಕ ಸಾರಿಗೆ ಇಲಾಖೆ ಮತ್ತು ವಿಟ್ಲ ಪೊಲೀಸ್ ಇಲಾಖೆಯ ಆಶ್ರಯದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆ

- Advertisement -
- Advertisement -

ವಿಟ್ಲ: ವಿಟ್ಲದ ಹೃದಯ ಭಾಗದ ನಾಲ್ಕು ರಸ್ತೆಯಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತು ವಿಟ್ಲ ಪೊಲೀಸ್ ಠಾಣೆಯ ಅಧಿಕಾರಿಗಳು ಜಂಟಿಯಾಗಿ ಸಾರಿಗೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ನಡೆಸಿದರು.

ದ್ವಿಚಕ್ರ ವಾಹನಗಳ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯವಾಗಿದ್ದರೂ ಬೇಕಾಬಿಟ್ಟಿಯಾಗಿ ನಿಯಮ ಉಲ್ಲಂಘಿಸುವ ಸವಾರರಿಗೆ ಇಂದಿನ ಕಾರ್ಯಾಚರಣೆ ಬಿಸಿ ಮುಟ್ಟಿಸಿದೆ. ಮಾಸಾಚರಣೆ ಅಂಗವಾಗಿ ಯಾವುದೇ ದಂಡ ವಿಧಿಸದೇ ಸವಾರರಿಗೆ ಕಾನೂನಿನ ಬಗ್ಗೆ ವಿವರಿಸಿದ ಅಧಿಕಾರಿಗಳು ಮಿತಿ ದರದಲ್ಲಿ ತಲಾ ಐನೂರರಂತೆ ಹೆಲ್ಮೆಟ್ ಪಡೆಯಲು ಸೂಚಿಸಿದರು. ಎಳೆಯ ಪುಟಾಣಿಗಳ ಬೇಜವಾಬ್ದಾರಿಯಿಂದ ಕುಳ್ಳಿರಿಸುವ ಸವಾರರಿಗೆ ಇಲಾಖೆಯ ವತಿಯಿಂದಲೇ ಉಚಿತ ಸೇಫ್ಟಿ ಬೆಲ್ಟ್ ವಿತರಿಸಲಾಗಿದೆ.

ಶಾಲಾ ಮಕ್ಕಳನ್ನು ಕುರಿಗಳಂತೆ ತುಂಬಿಸಿ ಬೇಕಾಬಿಟ್ಟಿಯಾಗಿ ನಿಯಮ ಉಲ್ಲಂಘಿಸಿ ಕರೆದೊಯ್ಯುತ್ತಿದ್ದ ಶಾಲಾ ಬಸ್‌ಗಳ ದಾಖಲೆ ಪರಿಶೀಲಿಸಲಾಯಿತು. ಈ ಸಂದರ್ಭ ಇನ್ಸೂರೆನ್ಸ್, ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದೇ ಐದಾರು ವರ್ಷಗಳಿಂದ ಓಡಾಡುತ್ತಿದ್ದ ಐದು ಬಸ್ಸುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ಮತ್ತು ಸಾರಿಗೆ ಇಲಾಖೆಯ ಜಂಟಿ ಕಾರ್ಯಾಚರಣೆಗೆ ಸಾರ್ವಜನಿಕರು ಹಾಗೂ ನಿಯಮ ಪಾಲಿಸುವ ವಾಹನ ಸವಾರರ ಶ್ಲಾಘನೆಗೆ ಪಾತ್ರವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಾಚರಣೆ ನಡೆಸುವ ಮೂಲಕ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ಕಾನೂನಿನ ಶಿಕ್ಷೆ ನೀಡಲಿದ್ದೇವೆಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಬಂಟ್ವಾಳ ಪ್ರಾದೇಶಿಕ ಸಾರಿಗೆ ಕಛೇರಿಯ ಅಧಿಕಾರಿಗಳಾದ ಚರಣ್, ಪ್ರಮೋದ್ ಕೆ.ಭಟ್, ಸಚಿನ್, ಪೊಲೀಸ್ ಅಧಿಕಾರಿಗಳಾದ ಬಿ.ಎಸ್.ನಾಯಕ, ವಿದ್ಯಾ ಕೆ.ಜೆ. ಹಾಗೂ ಮತ್ತಿತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!