



ವಿಟ್ಲ: ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ, ವಿಟ್ಲದಲ್ಲಿ ಭ|| ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ|| ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ ಹಾಗೂ ಯಕ್ಷಿ ಶ್ರೀ ಪದ್ಮಾವತಿ ಅಮ್ಮನವರ ಮತ್ತು ಯಕ್ಷಿ ಶ್ರೀ ಜ್ವಾಲಾಮಾಲಿನಿ ಅಮ್ಮನವರ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ಫೆ. 13 ನೇ ಗುರುವಾರದಿಂದ ರಿಂದ ಫೆ. 17 ನೇ ಸೋಮವಾರದವೆರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹಳ ಅದ್ದೂರಿಯಾಗಿ ನಡೆಯಿತು.



ಫೆ. 13 ರಂದು ಶ್ರೀ ಕ್ಷೇತ್ರಪಾಲ ಪ್ರತಿಷ್ಠೆ, ಸೇರಿದಂತೆ ವಿವಿಧ ವೈದಿಕ ವಿಧಿ ವಿಧಾನಗಳು ನಡೆಯಿತು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು, ಅಳದಂಗಡಿ ಅರಮನೆ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪರಮಪೂಜ್ಯ ಭಾರತಭೂಷಣ ಸ್ವಸ್ತೀ ಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯರು ಮಹಾಸ್ವಾಮಿಗಳವರು, ಶ್ರೀ ಜೈನಮಠ ಕಾರ್ಕಳ ಇವರು ಶುಭ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ರಾತ್ರಿ ಡೈನಾಮಿಕ್ ಡ್ಯಾನ್ಸ್ ಫ್ಯಾಕ್ಟರಿ ಉಜಿರೆ ಇವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ದಿನಾಂಕ:14-02-2025ನೇ ಶುಕ್ರವಾರ ಬೆಳಿಗ್ಗೆ 8.00ರಿಂದ ನಿತ್ಯ ವಿಧಿ ಸಹಿತ ಶ್ರೀ ಪೀಠ ಯಂತ್ರಾರಾಧನಾ ವಿಧಾನ ನಡೆದು ಶ್ರೀ ಯಕ್ತಿ ಜ್ವಾಲಾಮಾಲಿನಿ ದೇವಿ ಪ್ರತಿಷ್ಠೆ ಹಾಗೂ ಶ್ರೀ ಯಕ್ಷಿ ಪದ್ಮಾವತಿ ದೇವಿ ಪ್ರತಿಷ್ಠೆ, ಜಲಯಾತ್ರಾ ಮಹೋತ್ಸವ ನಡೆಯಿತು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಡಿ. ಸುರೇಂದ್ರ ಕುಮಾರ್ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀ ಜೈನಮಠ, ಮೂಡುಬಿದಿರೆ ಪರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಆಶೀರ್ವಚನ ಮತ್ತು ಪಾವನ ಸಾನ್ನಿಧ್ಯ ನೀಡಲಿದ್ದಾರೆ. ಪರಮಪೂಜ್ಯ ಶ್ರೀ ಸಚ್ಚಿದಾನಂದಭಾರತೀ ಮಹಾಸ್ವಾಮಿ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ, ಶ್ರೀ ಎಡನೀರು ಮಠ, ಕಾಸರಗೋಡು, ಶ್ರೀಧಾಮ ಮಾಣಿಲ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶುಭ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಬಳಿಕ ಕಲಾಮಯಂ, ಉಡುಪಿ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

15-02-2025ನೇ ಶನಿವಾರ ಬೆಳಿಗ್ಗೆ ನಿತ್ಯವಿಧಿವಿಧಾನ ನಡೆದು ಬಳಿಕ ೧೦೮ ಕಲಕಗಳಿಂದ ಜಿನಬಾಲಕನ ಜನ್ಮಾಭಿಷೇಕ, ನಾಮಕರಣ, ಬಾಲಲೀಲಾ ಮಹೋತ್ಸವ ನಡೆಯಿತು. ನಂತರ ರಾಜ್ಯಾಭಿಷೇಕ ನಡೆದು ವೈರಾಗ್ಯಪೂರ್ವಕ ದೀಕ್ಷಾ ವಿಧಿ, ಪರಿನಿಷ್ಟಮಣ ಕಲ್ಯಾಣ. ೧೪ ಕಲಕ ಅಭಿಷೇಕ, ಮಹಾಪೂಜೆ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀಮತಿ ಅನಿತಾ ಡಿ. ಸುರೇಂದ್ರ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಡಾ॥ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಶ್ರೀ ಜೈನಮಠ ಮೂಡುಬಿದಿರೆ, ಪರಮಪೂಜ್ಯ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಶ್ರೀ ಸಿಂಹನಗದ್ದೆ ಬಸ್ತಿ ಮಠ, ನರಸಿಂಹರಾಜಪುರ ಆಶೀರ್ವಚನ ಮತ್ತು ಪಾವನ ಸಾನ್ನಿಧ್ಯ ನೀಡಲಿದ್ದಾರೆ. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್, ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಶುಭ ಆಶೀರ್ವಚನ ನೀಡಿದರು. ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು. ಸಭೆಯಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು. ಬಳಿಕ ಉಜಿರೆ ಎಸ್. ಡಿ. ಎಂ. ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಎಸ್.ಡಿ.ಎಂ. ಕಲಾ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

16-02-2025ನೇ ರವಿವಾರದಂದು ಬೆಳಗ್ಗೆ ನಿತ್ಯವಿಧಿ ಸಹಿತ ಆಹಾರದಾನ ವಿಧಿ ಶ್ರೀಗಂಧಯಂತ್ರಾರಾಧನಾ ವಿಧಾನ ನಡೆದು ಭಗವಾನ್ ಶ್ರೀ ಚಂದ್ರನಾಥ ತೀರ್ಥಂಕರರ ಮತ್ತು ಭಗವಾನ್ ಶ್ರೀ ಮಹಾವೀರ ತೀರ್ಥಂಕರರ ಕೇವಲಜ್ಞಾನ ಕಲ್ಯಾಣ, ಮುಖವಸ್ಥ ಉದ್ಘಾಟನೆ ನಡೆಯಿತು. ೧೦೮ ಕಲಶ ಅಭಿಷೇಕ, ಮಹಾಪೂಜೆ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಶ್ರೀ ಜೈನಮಠ, ಮೂಡುಬಿದಿರೆ, ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಶ್ರೀ ಜೈನ ಮಠ, ಕಾರ್ಕಳ ಇವರು ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ರಾತ್ರಿ ಮಂಗಳೂರಿನ ಜೈನ ಸಮಾಜದವರಿಂದ ಶ್ರೀ ಸುಕುಮಾರ್ ಬಲ್ಲಾಳ್, ಮಂಗಳೂರು ಇವರ ಸಾಹಿತ್ಯ ಮತ್ತು ನಿರ್ದೇಶನದ ಭಗವಾನ್ ಶ್ರೀ ಚಂದ್ರನಾಥ ತೀರ್ಥಂಕರರ ಪಂಚಕಲ್ಯಾಣ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.



ದಿನಾಂಕ:17-02-2025ನೇ ಸೋಮವಾರದಂದು ನಿತ್ಯವಿಧಿ ಸಹಿತ ಸರ್ವರಕ್ಷಾಯಂತ್ರಾರಾಧನಾ ನಡೆದು ಬಳಿಕ ೧೦೦೮ ಕಲಶಗಳಿಂದ ಮಹಾಭಿಷೇಕ ಮಹೋತ್ಸವ ನಡೆಯಿತು. ಬಳಿಕ ಭಾರತೀಯ ಜೈನ್ ಮಿಲನ್, ವಲಯ-8 ಉಪಾಧ್ಯಕ್ಷ ಸುದರ್ಶನ್ ಜೈನ್ ಪಂಜಿಕಲ್ಲು ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಡಾ॥ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಶ್ರೀ ಜೈನಮಠ, ಮೂಡುಬಿದಿರೆ, ಪರಮಪೂಜ್ಯ ಶ್ರೀಮದ್ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಅತಿಶಯ ಕ್ಷೇತ್ರ, ಶ್ರೀ ಜೈನ ಮಠ, ಹೊಂಬುಜ ಇವರು ಆಶೀರ್ವಚನ ನೀಡಿದರು. ಬಳಿಕ ರಾತ್ರಿ ಶಾರದಾ ಆರ್ಟ್ಸ್ ಕಲಾವಿದರು (ರಿ.), ಮಂಜೇಶ್ವರ ಅಭಿನಯಿಸುವ ಗಡಿನಾಡ ಕಲಾನಿಧಿ ಕೃಷ್ಣ ಜಿ. ಮಂಜೇಶ್ವರ ಇವರ ಸಾರಥ್ಯದ “ಕಥೆ ಎಡ್ಡೆಂಡು” ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು. ಒಟ್ಟು ಐದು ದಿನಗಳ ವರೆಗೆ ನಡೆದ ಪಂಚಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸಿದರು.



