- Advertisement -
- Advertisement -



ತುಮಕೂರು : ನಿರ್ಜನ ಪ್ರದೇಶದ ಪೊದೆಯ ಬಳಿ ನವಜಾತ ಹೆಣ್ಣು ಶಿಶುವೊಂದು ಅನಾಥವಾಗಿ ಪತ್ತೆಯಾಗಿದ್ದು ಸ್ಥಳೀಯರು ಸೇರಿ ಮಗುವನ್ನು ರಕ್ಷಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಸಿರಾ ತಾಲ್ಲೂಕಿನ ಮಾಟನಹಳ್ಳಿಯಲ್ಲಿ ನಡೆದಿದೆ.
ಮಂಗಳವಾರ ಬೆಳಿಗ್ಗೆ ನಿರ್ಜನ ಪ್ರದೇಶದಲ್ಲಿ ಮಗು ಅಳುತ್ತಿರುವ ಸದ್ದು ಕೇಳಿ ಸ್ಥಳೀಯರು ಹೋಗಿ ನೋಡಿದಾಗ ಪೊದೆಯ ಒಳಗೆ ನವಜಾತ ಹೆಣ್ಣು ಶಿಶುವನ್ನು ಯಾರೋ ಬಿಟ್ಟು ಹೋಗಿರುವುದು ಕಂಡುಬಂದಿದೆ ಕೂಡಲೇ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಬಳಿಕ ಮಗುವನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಸಿರಾದ ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೀನ ಕೃತ್ಯ ಎಸಗಿದ ದುಷ್ಕರ್ಮಿಗಳ ಪತ್ತೆಗೆ ಮುಂದಾಗಿದ್ದಾರೆ.
- Advertisement -