Sunday, June 29, 2025
spot_imgspot_img
spot_imgspot_img

ಕುಂದಾಪುರ: ರಾಮಂದಿರದ ಮೂರ್ತಿ ಕಳವು ಪ್ರಕರಣ; ಹೊಳೆಬದಿಯಲ್ಲಿ ಬಿಟ್ಟು ಕಳ್ಳರು ಪರಾರಿ..!

- Advertisement -
- Advertisement -

ಕುಂದಾಪುರ:ಕೋಟ ವ್ಯಾಪ್ತಿಯ ಶಿರಿಯಾರ ಕಲಮರ್ಗಿ ರಾಮಮಂದಿರದಲ್ಲಿದ್ದ ರಾಮನ ಮೂರ್ತಿ ಸಹಿತ ಇತರ ಮೂರ್ತಿಗಳನ್ನು ಮಂಗಳವಾರ ರಾತ್ರಿ ಕಳ್ಳರು ಕದ್ದೊಯ್ದ ಘಟನೆ ನಡೆದಿದೆ.

ಆದರೆ ಕಳ್ಳರು ಹೊಳೆಯ ಬದಿಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಮಂಗಳವಾರ ರಾತ್ರಿ ಕಳವು ನಡೆದಿದೆ. ಬುಧವಾರ ಬೆಳಿಗ್ಗೆ ವಿಷಯ ಬೆಳಕಿಗೆ ಬಂದಿದೆ.

ತಕ್ಷಣ ಕೋಟ ಪೊಲೀಸರು ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಶ್ವಾನದಳವೂ ಆಗಮಿಸಿದೆ. ಕಳ್ಳರ ಹೆಜ್ಜೆ ಜಾಡನ್ನು ಹಿಂಬಾಸಿದ ಪೊಲೀಸ್ ಶ್ವಾನ ಸಮೀಪದ ಹೊಳೆ ಬದಿಗೆ ಹೋಗಿದೆ. ಶ್ವಾನವನ್ನು ಹಿಂಬಾಲಿಸಿಕೊಂಡು ಹೋದಾಗ ಕಳವಾದ ಮೂರ್ತಿಗಳು ಹೊಳೆ ಬದಿಯಲ್ಲಿ ಇರುವುದು ಕಂಡು ಬಂದಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!