Sunday, June 29, 2025
spot_imgspot_img
spot_imgspot_img

ಚನ್ನರಾಯಪಟ್ಟಣ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಮಂಗಳೂರಿನ ಯುವಕ ಮೃತ್ಯು..!

- Advertisement -
- Advertisement -

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಗೆ ಪಲ್ಟಿಯಾಗಿ, ಕ್ಲೀನರ್‌ವೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕೋನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತಪಟ್ಟ ಯುವಕನ್ನು ಮಂಗಳೂರಿನ ಬಣತಾಡಿ ಗ್ರಾಮದ ದಿ. ರಹೀಮ್ ರವರ ಮಗ ಉಮ್ಮರ್ ಸಲ್ಮನ್ ಫಾರಿಶ್ (18) ಎಂದು ಗುರುತಿಸಲಾಗಿದೆ.

ಕಲ್ಲಡ್ಕ ಮೂಲದ ಫಾಹಾದ್ ಎಂಬವರು ಚಾಲಕರಗಿದ್ದ ಪ್ಲೈವುಡ್ ತುಂಬಿದ್ದ ಲಾರಿ ವೇಗವಾಗಿ ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ ಎನ್ನಲಾಗಿದೆ.ಲಾರಿ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ ಘಟನಾ ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!