Saturday, June 28, 2025
spot_imgspot_img
spot_imgspot_img

ಉಡುಪಿ: ವ್ಯಕ್ತಿ ನಾಪತ್ತೆ; ಪತ್ತೆಗಾಗಿ ಮನವಿ..!

- Advertisement -
- Advertisement -

ಉಡುಪಿ: ಜನವರಿ 25 ರಂದು ಉತ್ತರ ಪ್ರದೇಶದ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್ ಮತ್ತು ಕಾಶಿಗೆ ಹೋಗುತ್ತಿದ್ದೇನೆ ಎಂದು ಕುಟುಂಬಕ್ಕೆ ತಿಳಿಸಿದ್ದ ವ್ಯಕ್ತಿ ವಾಪಸ್ಸು ಬಾರದೇ ನಾಪತ್ತೆಯಾದ ಘಟನೆ ನಡೆದಿದೆ.

ನಾಪತ್ತೆಯಾದ ವ್ಯಕ್ತಿಯನ್ನು ಕಾರ್ಕಳ ತಾಲ್ಲೂಕಿನ ಕಾಬೆಟ್ಟು ನಿವಾಸಿ ಸುಧಾಕರ್ ಪೂಜಾರಿ (69) ಎಂದು ಗುರುತಿಸಲಾಗಿದೆ.

ಜನವರಿ 27 ರಿಂದ ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಮತ್ತು ಇದುವರೆಗೆ ಮನೆಗೆ ಹಿಂತಿರುಗಿಲ್ಲ ಎಂದು ಅವರ ಕುಟುಂಬ ಮಾಹಿತಿ ನೀಡಿದೆ.

ಅವರು 5 ಅಡಿ ಎತ್ತರ, ದುಂಡಗಿನ ಮುಖ, ಗೋಧಿ ಮೈಬಣ್ಣ ಹೊಂದಿದ್ದಾರೆ ಮತ್ತು ಕನ್ನಡ, ಹಿಂದಿ, ಇಂಗ್ಲಿಷ್, ತುಳು ಮತ್ತು ಮರಾಠಿ ಮಾತನಾಡುತ್ತಾರೆ. ಅವರ ಬಗ್ಗೆ ಮಾಹಿತಿ ಇರುವ ಯಾರಾದರೂ ಕಾರ್ಕಳ ನಗರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08258-230213, 233100, ಮೊ. ಸಂಖ್ಯೆ: 9480805461 ಅನ್ನು ಸಂಪರ್ಕಿಸಬಹುದು ಎಂದು ಕಾರ್ಕಳ ನಗರ ಪೊಲೀಸ್ ಠಾಣೆಯ ಸಬ್-ಇನ್ಸ್‌ಪೆಕ್ಟರ್ ಕಚೇರಿಯ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!