- Advertisement -
- Advertisement -


ಮೈಸೂರು: ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಮೇದಿನಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕರನ್ನು ಕೊಳ್ಳೇಗಾಲ ಪಟ್ಟಣದ ನಿವಾಸಿಗಳಾದ ಭರತ್ (17), ಲಿಖಿತ್ (18) ಎಂದು ಗುರುತಿಸಲಾಗಿದೆ.
ಮೇದಿನಿ ಗ್ರಾಮದ ರಾಮಕಟ್ಟೆ ಬಳಿ ಈಜಲು ಐವರು ತೆರಳಿದ್ದರು. ಈ ವೇಳೆ ಭರತ್ ಹಾಗೂ ಲಿಖಿತ್ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದು, ಉಳಿದ ಮೂವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ನೀರಿನಲ್ಲಿ ಕೊಚ್ಚಿ ಹೋಗಿರುವ ಭರತ್ ಹಾಗೂ ಲಿಖಿತ್ ಮೃತದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಈ ಬಗ್ಗೆ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -