Sunday, June 29, 2025
spot_imgspot_img
spot_imgspot_img

ಬ್ರಹ್ಮಾವರ: ಟಿಪ್ಪರ್ – ಬೈಕ್‌ ನಡುವೆ ಅಪಘಾತ; ಸವಾರ ಸಾವು, ಸಹಸವಾರ ಗಂಭೀರ..!

- Advertisement -
- Advertisement -

ಬ್ರಹ್ಮಾವರ: ಟಿಪ್ಪರ್ ಹಾಗೂ ಬೈಕ್‌ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಪೇತ್ರಿ ಜಂಕ್ಷನ್ ಬಳಿ ನಡೆದಿದೆ.

ಮೃತಪಟ್ಟ ಬೈಕ್ ಸವಾರ ಸಾಸ್ತಾನ, ಐರೋಡಿ ಗೋಳಿಬೆಟ್ಟು ನಿವಾಸಿ ದೀಕ್ಷಿತ್ (24) ಹಾಗೂ ಗಂಭೀರ ಗಾಯಗೊಂಡ ಗಂಭೀರ ಗಾಯಗೊಂಡಿ ಎಂದು ಗುರುತಿಸಲಾಗಿದೆ.

ಸೋಮೇಶ್ವರ ಸಮೀಪದ ಕೂಡ್ಲು ಫಾಲ್ಸ್‌‌ಗೆ ಪ್ರವಾಸಕ್ಕೆ ಹೋಗಿದ್ದ ಯುವಕರು ಹಿಂದಿರುಗಿ ಬರುವಾಗ ಟಿಪ್ಪರ್ ಚಾಲಕ ಅತೀವೇಗ ಹಾಗೂ ಅಜಾಗರೂಕತೆ ಚಲಾಯಿಸಿಕೊಂಡು ಹೋದ ಕಾರಣ ಈ ದುರ್ಘಟನೆ ಸಂಭವಿಸಿದೆ. ಬ್ರಹ್ಮಾವರದಿಂದ ಕುಕ್ಕೆಹಳ್ಳಿ ಕಡೆಗೆ ಹೋಗುವ ಸಲುವಾಗಿ ಪೇತ್ರಿ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗುವ ವೇಳೆ ಹೆಬ್ರಿ ಕಡೆಯಿಂದ ಬ್ರಹ್ಮಾವರಕ್ಕೆ ಹೋಗುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರರಿಬ್ಬರೂ ರಸ್ತೆಗೆ ಅಪ್ಪಳಿಸಿ ತಲೆಗೆ ಗಂಭೀರ ಗಾಯಗಳಾಗಿದ್ದು, ಸವಾರ ದೀಕ್ಷಿತ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸಹಸವಾರ ಅಭಿಷೇಕ್ ಗಂಭೀರ ಗಾಯಗೊಂಡಿದ್ದು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!