- Advertisement -
- Advertisement -


ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಏ.10 ರಿಂದ 20ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು.
ಬೆಳಿಗ್ಗೆ ದೇವಸ್ಥಾನದಲ್ಲಿ ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರ ವೈದಿಕ ವಿಧಾನಗಳನ್ನು ನೇರವೆರಿಸಿದರು. ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು.

ಈ ಸಂದರ್ಭದಲ್ಲಿ ಶಾಸಕ ಅಶೋಕ್ ರೈ ಅವರ ಮಾರ್ಗದರ್ಶನದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ, ಸದಸ್ಯರಾದ ನಳಿನಿ ಪಿ ಶೆಟ್ಟಿ, ಈಶ್ವರ ಬೆಡೇಕರ್, ವಿನಯ ಸುವರ್ಣ, ದಿನೇಶ್ ಪಿ ವಿ, ಮಹಾಬಲ ರೈ ವಳತ್ತಡ್ಕ, ಕೃಷ್ಣವೇಣಿ, ಸುಭಾಶ್ ರೈ ಬೆಳ್ಳಿಪ್ಪಾಡಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ್ ರೈ ಮೇಗಿನಗುತ್ತು, ಕರಸೇವಕರು, ಭಕ್ತಾದಿಗಳು ಉಪಸ್ಥಿತರಿದ್ದತರು.

- Advertisement -