Monday, June 30, 2025
spot_imgspot_img
spot_imgspot_img

ಉಕ್ರೇನ್‌ನಲ್ಲಿರುವ ಭಾರತೀಯ ಔಷಧ ಕಂಪನಿ ಮೇಲೆ ರಷ್ಯಾ ಕ್ಷಿಪಣಿ ದಾಳಿ

- Advertisement -
- Advertisement -

ಉಕ್ರೇನ್ ನಲ್ಲಿರುವ ಭಾರತೀಯ ಔಷಧ ಕಂಪನಿ ಕುಸುಮ್ ನ ಗೋದಾಮಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ರಷ್ಯಾ “ಉದ್ದೇಶಪೂರ್ವಕವಾಗಿ” ಉಕ್ರೇನ್‌ನಲ್ಲಿರುವ ಭಾರತೀಯ ವ್ಯವಹಾರಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಉಕ್ರೇನ್‌ ರಾಯಭಾರ ಕಚೇರಿ ಆರೋಪಿಸಿದೆ. ಮಕ್ಕಳು ಮತ್ತು ವೃದ್ಧರಿಗೆ ಮೀಸಲಾದ ಔಷಧಿಗಳನ್ನು ನಾಶಪಡಿಸುತ್ತದೆ” ಎಂದು ಅದು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಭಾರತೀಯ ಉದ್ಯಮಿ ರಾಜೀವ್ ಗುಪ್ತಾ ಒಡೆತನದ ಕುಸುಮ್ ಕಂಪನಿಯ ಮೇಲೆ ದಾಲಿ ನಡೆದಿದೆ. ಇದು ಉಕ್ರೇನ್‌ನ ದೊಡ್ಡ ಔಷಧ ಕಂಪನಿಗಳಲ್ಲೊಂದು.

ಇಂದು, ರಷ್ಯಾದ ಕ್ಷಿಪಣಿಯು ಉಕ್ರೇನ್‌ನಲ್ಲಿರುವ ಭಾರತೀಯ ಔಷಧ ಕಂಪನಿ ಕುಸುಮ್‌ನ ಗೋದಾಮಿನ ಮೇಲೆ ದಾಳಿ ಮಾಡಿದೆ. ಭಾರತದ ಜೊತೆ ‘ವಿಶೇಷ ಸ್ನೇಹ’ ಎಂದು ಹೇಳಿಕೊಳ್ಳುತ್ತಾ, ಮಾಸ್ಕೋ ಉದ್ದೇಶಪೂರ್ವಕವಾಗಿ ಭಾರತೀಯ ವ್ಯವಹಾರಗಳನ್ನು ಗುರಿಯಾಗಿಸಿಕೊಂಡಿದೆ – ಮಕ್ಕಳು ಮತ್ತು ವೃದ್ಧರಿಗೆ ಮೀಸಲಾದ ಔಷಧಿಗಳನ್ನು ನಾಶಪಡಿಸುತ್ತಿದೆ” ಎಂದು ಉಕ್ರೇನ್‌ನ ರಾಯಭಾರಿ ಕಚೇರಿ ಆರೋಪಿಸಿದೆ. ಕಂಪನಿಯ ಉತ್ಪನ್ನಗಳು ಉಕ್ರೇನ್ ನಾದ್ಯಂತ ನಿರ್ಣಾಯಕವಾಗಿವೆ ಏಕೆಂದರೆ ಅವು ಮೂಲಭೂತ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸುತ್ತವೆ ಎಂದು ಮೂಲಗಳು ತಿಳಿಸಿವೆ. ಗೋದಾಮಿನ ಮೇಲೆ ಕ್ಷಿಪಣಿಯಲ್ಲ, ಡ್ರೋನ್ ನೇರವಾಗಿ ದಾಳಿ ನಡೆಸಿದೆ ಎಂದು ಮಾಲೀಕ ತಿಳಿಸಿದ್ದಾರೆ.

- Advertisement -

Related news

error: Content is protected !!