- Advertisement -
- Advertisement -




ಬೆಂಗಳೂರು: ಬೆಂಗಳೂರಿನಲ್ಲಿ ಅಂಬೇಡ್ಕರ್ ಮ್ಯೂಸಿಯಮ್ ಮತ್ತು ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ಬಾಬಾ ಸಾಹೇಬರ ಜೀವನ ಸಾಧನೆಗಳನ್ನು ಮತ್ತಷ್ಟು ಪ್ರಚುರಪಡಿಸಲು ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲಿ ಮ್ಯೂಸಿಯಮ್ ಮತ್ತು ಆಂಧ್ರದ ಮಾದರಿಯನ್ನೂ ಮೀರಿದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಎಂದರು.
- Advertisement -








