Saturday, June 28, 2025
spot_imgspot_img
spot_imgspot_img

ಕುಂದಾಪುರ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಒಮ್ನಿ ಢಿಕ್ಕಿ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!

- Advertisement -
- Advertisement -

ಕುಂದಾಪುರ: ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ಒಮ್ನಿ ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಚಂದ್ರ ಎಂದು ಗುರುತಿಸಲಾಗಿದೆ.

ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಒಮ್ನಿ ಕಾರನ್ನು ಅದರ ಚಾಲಕ ಲವ ಕುಮಾರ ಎಂಬುವವನು ಅತೀ ವೇಗ ಹಾಗೂ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿಕೊಂಡು ರಸ್ತೆಯ ತೀರ ಎಡಬದಿಗೆ ಬಂದು ರಸ್ತೆಯ ಪೂರ್ವಬದಿಯಲ್ಲಿ ನಿಂತುಕೊಂಡಿದ್ದ ಚಂದ್ರರವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅವರ ತಲೆಗೆ ಹಾಗೂ ಬಲಕಾಲಿಗೆ ತೀವು ಸ್ವರೂಪದ ರಕ್ತಗಾಯವಾಗಿದ್ದು, ತಕ್ಷಣ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಒಮ್ನಿ ಕಾರ್‌ನಲ್ಲಿದ್ದ ಅನುಸೂಯ ಮತ್ತು ರಮಾಮಣಿ ರವರಿಗೂ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!