Saturday, June 28, 2025
spot_imgspot_img
spot_imgspot_img

ಮಂಗಳೂರು: ನಿಯಂತ್ರಣ ತಪ್ಪಿ ಕಾರು ಪಲ್ಟಿ; ಯುವಕ ಸಾವು..!

- Advertisement -
- Advertisement -

ಮಂಗಳೂರು: ಕೆಂಜಾರ್ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಪೆರ್ಮುದೆಯ 27 ವರ್ಷದ ಜೋಶ್ವಾ ಪಿಂಟೋ ಎಂದು ಗುರುತಿಸಲಾಗಿದೆ.

ವರದಿಗಳ ಪ್ರಕಾರ, ಜೋಶ್ವಾ ಅವರು ಈಸ್ಟರ್ ವಸ್ತುಗಳನ್ನು ಖರೀದಿಸಿ ಮಂಗಳೂರಿನಿಂದ ಸ್ನೇಹಿತರೊಂದಿಗೆ ಹಿಂತಿರುಗುತ್ತಿದ್ದಾಗ ರಸ್ತೆಯಲ್ಲಿದ್ದ ಗುಂಡಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ನಿಯಂತ್ರಣ ತಪ್ಪಿ ವಾಹನವು ತಿರುವಿನಲ್ಲಿ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.

ಐಸಿವೈಎಂ ಬಜ್ಪೆ ಘಟಕದ ಸಕ್ರಿಯ ಸದಸ್ಯರಾಗಿದ್ದ ಜೋಶ್ವಾ ಅವರು ತಮ್ಮ ನಿಸ್ವಾರ್ಥ ಸೇವೆಯಿಂದ ಗುರುತಿಸಿಕೊಂಡಿದ್ದರು. ಅವರ ನಾಯಕತ್ವ ಗುಣಗಳು ಮತ್ತು ಎಲ್ಲರೊಂದಿಗಿನ ಉತ್ತಮ ಬಾಂಧವ್ಯಕ್ಕಾಗಿ ಅವರು ಧರ್ಮಗುರುಗಳಿಂದ ಗೌರವಿಸಲ್ಪಟ್ಟಿದ್ದರು.

- Advertisement -

Related news

error: Content is protected !!