- Advertisement -
- Advertisement -





ಕಡಬ: ಮಿದುಳು ರಕ್ತಸ್ರಾವ (ಬ್ರೈನ್ ಹ್ಯಾಮರೇಜ್)ದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಹೆಸರಾಂತ ಕಬಡ್ಡಿ ಆಟಗಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನುಕಡಬ ತಾಲೂಕು ಕೊಂಬಾರು ಗ್ರಾಮದ ಕಮರ್ಕಜೆ ಶಿನಪ್ಪ ಗೌಡ ಎಂಬವರ ಪುತ್ರ ಕೋಕಿಲಾನಂದ ಎಂದು ಗುರುತಿಸಲಾಗಿದೆ.
ಮಿದುಳು ರಕ್ತಸ್ರಾವ ಉಲ್ಬಣಗೊಂಡು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರ ಚಿಕಿತ್ಸೆಯ ನೆರವಿಗಾಗಿ ಅನೇಕ ಸಂಘ ಸಂಸ್ಥೆಗಳು, ಗ್ರಾಮದ ನಿವಾಸಿಗಳು, ಕಬಡ್ಡಿ ಪ್ರೇಮಿಗಳು ಆರ್ಥಿಕ ಸಹಕಾರ ನೀಡಿದ್ದರು.ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದರು.
ಆದರೆ ಇಂದು (ಏ.24 ರಂದು) ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ. ಮೃತರ ಪ್ರಾರ್ಥಿವ ಶರೀರ ಸಂಜೆ ಗಂಟೆ 5 ರ ಹೊತ್ತಿಗೆ ಕಡಬಕ್ಕೆ ತಲುಪಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
- Advertisement -