Saturday, June 28, 2025
spot_imgspot_img
spot_imgspot_img

ಇಂದು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ

- Advertisement -
- Advertisement -

ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ದ.ಕ ಜಿಲ್ಲೆಯಾದ್ಯಂತ ಒಂದು ದಿನ ಬಂದ್ ನಡೆಸುವಂತೆ ಕರೆ ಕೊಟ್ಟಿದೆ. ರಾತ್ರಿ AJ ಆಸ್ಪತ್ರೆಗೆ ಭೇಟಿ ನೀಡಿದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪೈಲ್ ಕಾರ್ಯಕರ್ತರ ಆಕ್ರೋಶಕ್ಕೆ ಕಿವಿಯಾದರು.

ಈ ವೇಳೆ, ಕೊಲೆ ಘಟನೆಯನ್ನು ಖಂಡಿಸಿ ಒಂದು ದಿನ ಹರತಾಳ ನಡೆಸಬೇಕೆಂದು ಸೇರಿದ್ದ ಕಾರ್ಯಕರ್ತರು ಒತ್ತಾಯಿಸಿದರು. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಶರಣ್, ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ದ. ಕ ಜಿಲ್ಲೆಯಾದ್ಯಂತ ಬಂದ್ ಮಾಡಲಾಗುವುದು. ಕೊಲೆ ಕೃತ್ಯ ಎಸಗಿದ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.

- Advertisement -

Related news

error: Content is protected !!