- Advertisement -
- Advertisement -






ಬ್ರಹ್ಮಾವರ: ಬಿಪಿ ಹಾಗೂ ಮಧುಮೇಹ ಕಾಯಿಲೆಯಿಂದ ಬಳಲುತಿದ್ದ ವ್ಯಕ್ತಿಯೋರ್ವರು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಆರೂರಿನ ಸುಧಾಕರ (66) ಎಂದು ಗುರುತಿಸಲಾಗಿದೆ.
ಸುಧಾಕರ ಎಂಬವರ ಮೃತದೇಹ ಶುಕ್ರವಾರ ಸಂಜೆ ವೇಳೆ ಮನೆಯ ಸಮೀಪ ಇರುವ ಮಡಿ ಹೊಳೆಯಲ್ಲಿ ಪತ್ತೆಯಾಗಿದೆ. ಅವರು ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಹೊಳೆಗೆ ಹಾರಿ ಮೃತಪಟ್ಟಿರಬೇಕೆಂದು ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಅಪರಾಹ್ನ 2ಗಂಟೆಯ ಸುಮಾರಿಗೆ ಮನೆಯಿಂದ ಯಾರಿಗೂ ಹೇಳದೇ ಹೊರಗೆ ಹೋಗಿದ್ದ ಸುಧಾಕರ್ ಗಾಗಿ ಹುಡುಕಾಡಿದಾಗ ಅವರು ಬಳಸುತಿದ್ದ ಊರುಗೋಲು ಹೊಳೆಯ ದಡದಲ್ಲಿ ಪತ್ತೆಯಾಗಿತ್ತು. ನೀರಿಗೆ ಬಿದ್ದಿರಬೇಕೆಂಬ ಸಂಶಯದಿಂದ ಹೊಳೆಯ ನೀರಿನಲ್ಲಿ ಹುಡುಕಾಡಿದಾಗ ಸಂಜೆ 6:30ರ ಸುಮಾರಿಗೆ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -