- Advertisement -
- Advertisement -



ಮಂಗಳೂರು: ಅಪಾರ್ಟ್ ಮೆಂಟ್ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳೂರಿನ ಕುದ್ರೋಳಿಯ ಶಿವಗಿರಿ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ಶಿವಗಿರಿ ಅಪಾರ್ಟ್ಮೆಂಟ್ನ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಪೂರ್ತಿ ಕಟ್ಟಡ ದಟ್ಟ ಹೊಗೆಯಿಂದ ಆವರಿಸಿಕೊಂಡಿತ್ತು. ಬೆಂಕಿ ಹೊತ್ತಿಕೊಂಡಿರುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ತಂಡ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಮಹಡಿ ತುಂಬಾ ಹೊಗೆ ಆವರಿಸಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯುಂಟಾಗಿತ್ತು. ಆದರೂ ಅಗ್ನಿಶಾಮಕ ದಳದವರ ಸಮಯಪ್ರಜ್ಞೆಯಿಂದ ಕಟ್ಟಡದಲ್ಲಿ ಸಿಲುಕಿದ್ದ ಅಸ್ವಸ್ಥ ವೃದ್ಧರೊಬ್ಬರ ರಕ್ಷಣೆ ಮಾಡಿದ್ದಾರೆ. ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಬೆಂಕಿ ಹೊತ್ತೊಕೊಳ್ಳಲು ಕಾರಣವೇನು ಎಂದು ತಿಳಿದು ಬರಬೇಕಿದೆ.
- Advertisement -